ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಪ್ರಭಾರ ಅಧ್ಯಕ್ಷರಾದ ಈಶ್ವರಪ್ಪ ಬಿ.ಎಸ್ ಹಾಗೂ ಸದಸ್ಯರಾದ ಉಮಾದೇವಿ ಎಸ್.ಹಿರೇಮಠ ಅವರು ₹2,73,106 ಪರಿಹಾರ ಮೊತ್ತ ಶೇ 6ರಂತೆ ಬಡ್ಡಿ ನೀಡಲು, ಮಾನಸಿಕ ಹಾಗೂ ದೈಹಿಕ ವ್ಯಥೆಗೆ ₹2 ಸಾವಿರ, ಪ್ರಕರಣದ ಖರ್ಚು ₹2 ಸಾವಿರಗಳನ್ನು 30 ದಿನದೊಳಗಾಗಿ ವಾಹನದ ಮಾಲೀಕನಿಗೆ ನೀಡಲು ಜನರಲ್ ಇನ್ಸೂರನ್ಸ್ ಕಂಪನಿಗೆ ಆದೇಶಿಸಿದ್ದಾರೆ.