ಆದರೆ, ತಂತಿಗಳನ್ನು ಸರಿಪಡದೇ ನಿರ್ಲಕ್ಷ್ಯ ತೋರಿದ ಕಾರಣ ಡಿ.15, 2020ರಂದು ಜೋರಾಗಿ ಬೀಸಿದ ಗಾಳಿಯಿಂದಾಗಿ ಸದರಿ ತಂತಿಗಳು ಒಂದಕ್ಕೊಂದು ತಾಗಿ ವಿದ್ಯುತ್ ಶಾರ್ಟ್ ಸರ್ಕಿಟ್ ಸಂಭವಿಸಿದ ಕಾರಣ ಕಟಾವಿಗೆ ಬಂದ ಕಬ್ಬಿನ ಬೆಳೆಗೆ ಬೆಂಕಿ ವ್ಯಾಪಿಸಿ ಕಬ್ಬು ಸಂಪೂರ್ಣ ಸುಟ್ಟು ಕರಕಲಾದ ಬಗ್ಗೆ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಕುರಿತಂತೆ ಹೆಸ್ಕಾಂ ಯಾವುದೇ ಕ್ರಮವಹಿಸಿದ ಕಾರಣ ರೈತರು ಪರಿಹಾರ ಹಣಕ್ಕಾಗಿ ಜಿಲ್ಲಾ ಗ್ರಾಹಕರ ಆಯೋಗದಲ್ಲಿ ದೂರು ದಾಖಲಿಸಿದ್ದರು.