ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಎಸ್‌ಪಿ ಸಂಘಟಿಸಲು ಮುಂದಾಗಿ’

Last Updated 22 ಸೆಪ್ಟೆಂಬರ್ 2020, 15:10 IST
ಅಕ್ಷರ ಗಾತ್ರ

ಹಾವೇರಿ: ‘ಜಿಲ್ಲೆಯಲ್ಲಿ ಬಹುಜನ ಸಮಾಜ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಮರೆಣ್ಣನವರ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸವಣೂರ ತಾಲ್ಲೂಕು ಘಟಕದ ಅಧ್ಯಕ್ಷರನೇಮಕ ಮಾಡಿ, ಆದೇಶ ಪತ್ರ ನೀಡಿ ಅವರು ಮಾತನಾಡಿದರು.

‘ಅಕ್ಕ ಮಾಯಾವತಿಯವರು ದೀನ ದಲಿತರ, ಹಿಂದುಳಿದ ಹಾಗೂ ಎಲ್ಲ ವರ್ಗದ ಜನರ ಪರವಾಗಿ ಕೆಲಸ ಮಾಡುವ ಉದ್ದೇಶ ಹೊಂದಿದ್ದಾರೆ. ಪಕ್ಷದ ಸಿದ್ಧಾಂತವೇ ಧ್ವನಿ ಇಲ್ಲದವರಿಗೆ ಧ್ವನಿ ನೀಡಿ, ಎಲ್ಲ ರಂಗದಲ್ಲಿ ಅವರನ್ನು ಮುಖ್ಯವಾಹಿನಿಗೆ ತರುವುದಾಗಿದೆ. ಇದಕ್ಕಾಗಿ ತಾವೆಲ್ಲರೂ ಕ್ರಿಯಾಶೀಲರಾಗಬೇಕಾಗಿದೆ’ ಎಂದರು.

ಸವಣೂರ ನೂತನ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ನೇಮಕರಾದ ಶಾಂತಪ್ಪ ಲಮಾಣಿ ಮಾತನಾಡಿ, ‘ಸಮಾಜದಲ್ಲಿ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಬಹುಜನ ಸಮಾಜ ಪಕ್ಷ ಸಿದ್ಧವಾಗಿದೆ. ಪಕ್ಷದ ನಾಯಕರು ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ, ಪಕ್ಷ ಸಂಘಟನೆ ಮಾಡಲು ಶ್ರಮಿಸುತ್ತೇನೆ’ ಎಂದರು.

ಪಕ್ಷದ ಮುಖಂಡರಾದ ಎನ್.ಟಿ.ಮಂಜುನಾಥ, ವಿಜಯಕುಮಾರ ವಿರಕ್ತಮಠ, ಎಂ.ಕೆ ಮಖಬೂಲ್, ಶಂಭುಲಿಂಗಯ್ಯ ಅನಗೊಡಿಮಠ, ಅಬ್ದುಲ್‍ ಖಾದರ ಧಾರವಾಡಕರ, ಭಾಷಾಸಾಬ ಅಗಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT