<p><strong>ಹಾವೇರಿ:</strong> ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ತೀವ್ರ ಪರದಾಡುತ್ತಿದ್ದಾರೆ. ಕೂಡಲೇ ಸಹಕಾರ ಸಂಘಗಳಿಗೆ ರಸಗೊಬ್ಬರ ಪೂರೈಸಿ, ಅನ್ನದಾತರ ಹಿತ ಕಾಯಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಮುಂಗಾರು ಹಂಗಾಮಿಗೆ ಗೋವಿನ ಜೋಳ, ಹತ್ತಿ ಬೆಳೆಗಳನ್ನು ರೈತರು ಬೆಳೆದಿರುತ್ತಾರೆ. ಮಳೆ ಹೆಚ್ಚಾದ ಕಾರಣಕ್ಕೆ ಬೆಳೆಗಳಿಗೆ ಶೀತ ರೋಗ ಅಂಟಿಕೊಳ್ಳುತ್ತದೆ. ಬೇರು ಕೊಳೆ ರೋಗದಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಯೂರಿಯಾ ಗೊಬ್ಬರದ ಅವಶ್ಯಕತೆ ಇದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಕ್ವಾರಂಟೈನ್ ಕೇಂದ್ರಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಉಪಹಾರ, ಊಟ ನೀಡುತ್ತಿಲ್ಲ. ಕೆಲವು ಕಡೆ ಮೂಲಸೌಲಭ್ಯ ಕೊರತೆ ಇದೆ.ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯೆತೆ ನೀಡಬೇಕು. ಎಲ್ಲ ವರ್ಗದ ಕಾರ್ಮಿಕರಿಗೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.<br /><br />ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸಂಜಯ ಡಾಂಗೆ, ಜಿಲ್ಲಾ ಕಾರ್ಯಾಧ್ಯಕ್ಷ ಉಮೇಶ ತಳವಾರ, ಜಿಲ್ಲಾ ಯುವ ಘಟಕ ಅಧ್ಯಕ್ಷ ಅಣ್ಣಯ್ಯ ಚಾವಡಿ, ಅಲ್ತಾಫ್ ನದಾಫ್, ಸುರೇಶ ನಾಯಕ್, ಮಂಜುನಾಥ ಕನ್ನಾಯ್ಕನವರ, ಸುನೀಲ ದಂಡೆಮ್ಮನವರ, ನಾಗರಾಜ ಎಂ.ಬಿ, ಮೌಲಾಲಿ ಎರೆಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ತೀವ್ರ ಪರದಾಡುತ್ತಿದ್ದಾರೆ. ಕೂಡಲೇ ಸಹಕಾರ ಸಂಘಗಳಿಗೆ ರಸಗೊಬ್ಬರ ಪೂರೈಸಿ, ಅನ್ನದಾತರ ಹಿತ ಕಾಯಬೇಕು ಎಂದು ಜೆಡಿಎಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.</p>.<p>ಮುಂಗಾರು ಹಂಗಾಮಿಗೆ ಗೋವಿನ ಜೋಳ, ಹತ್ತಿ ಬೆಳೆಗಳನ್ನು ರೈತರು ಬೆಳೆದಿರುತ್ತಾರೆ. ಮಳೆ ಹೆಚ್ಚಾದ ಕಾರಣಕ್ಕೆ ಬೆಳೆಗಳಿಗೆ ಶೀತ ರೋಗ ಅಂಟಿಕೊಳ್ಳುತ್ತದೆ. ಬೇರು ಕೊಳೆ ರೋಗದಿಂದ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳಲು ಯೂರಿಯಾ ಗೊಬ್ಬರದ ಅವಶ್ಯಕತೆ ಇದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.</p>.<p>ಕ್ವಾರಂಟೈನ್ ಕೇಂದ್ರಗಳಲ್ಲಿ ಸೋಂಕಿತರಿಗೆ ಗುಣಮಟ್ಟದ ಉಪಹಾರ, ಊಟ ನೀಡುತ್ತಿಲ್ಲ. ಕೆಲವು ಕಡೆ ಮೂಲಸೌಲಭ್ಯ ಕೊರತೆ ಇದೆ.ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯೆತೆ ನೀಡಬೇಕು. ಎಲ್ಲ ವರ್ಗದ ಕಾರ್ಮಿಕರಿಗೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.<br /><br />ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸಂಜಯ ಡಾಂಗೆ, ಜಿಲ್ಲಾ ಕಾರ್ಯಾಧ್ಯಕ್ಷ ಉಮೇಶ ತಳವಾರ, ಜಿಲ್ಲಾ ಯುವ ಘಟಕ ಅಧ್ಯಕ್ಷ ಅಣ್ಣಯ್ಯ ಚಾವಡಿ, ಅಲ್ತಾಫ್ ನದಾಫ್, ಸುರೇಶ ನಾಯಕ್, ಮಂಜುನಾಥ ಕನ್ನಾಯ್ಕನವರ, ಸುನೀಲ ದಂಡೆಮ್ಮನವರ, ನಾಗರಾಜ ಎಂ.ಬಿ, ಮೌಲಾಲಿ ಎರೆಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>