<p>ಬ್ಯಾಡಗಿ (ಹಾವೇರಿ ಜಿಲ್ಲೆ): ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಆರೋಪಿ ಮಹಮ್ಮದ್ ಶಫಿ ನಾಶಿಪುಡಿ ಎಂಬುವರನ್ನು ಬುಧವಾರ ತಡರಾತ್ರಿ ತಾಲ್ಲೂಕಿನ ಮೋಟೆಬೆನ್ನೂರ ಬಳಿಯಿರುವ ಎಸ್.ಎ.ಎನ್.ಕೋಲ್ಡ್ ಸ್ಟೋರೇಜ್ನಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದರು.</p>.<p>‘ಬ್ಯಾಡಗಿ ಹಾಗೂ ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಧ್ವನಿ ಪರೀಕ್ಷೆ ಮತ್ತು ವಿಚಾರಣೆಗಾಗಿ ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p>.<p>‘ಹಲವು ವರ್ಷಗಳಿಂದ ಬ್ಯಾಡಗಿಯಲ್ಲಿ ಮೆಣಸಿನಕಾಯಿ ವರ್ತಕ ಆಗಿರುವ ನಾಶಿಪುಡಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು’ ಎಂದು ಬಿಜೆಪಿ ಮುಖಂಡರು ಬುಧವಾರ ಪೊಲೀಸರಿಗೆ ದೂರು ಸಲ್ಲಿಸಿದ್ದರು.</p>.<p>Quote - ಶ್ರೀರಾಮುಲು ಕೋಟ್ ದೇಶದ್ರೋಹಿಗಳಿಗೆ ರಕ್ಷಣೆ ನೀಡುವುದು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ. ಪಾಕಿಸ್ತಾನ್ ಪರ ಘೋಷಣೆ ಕೂಗುವವರು ಭಾರತ ಬಿಟ್ಟು ಅಲ್ಲಿಯೇ ಹೋಗಲಿ. ಅಂಥವರ ವಿಮಾನ ಪ್ರಯಾಣದ ಖರ್ಚು ನಾವೇ ಕೊಡುತ್ತೇವೆ. –ಬಿ.ಶ್ರೀರಾಮುಲು ಬಿಜೆಪಿ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ಯಾಡಗಿ (ಹಾವೇರಿ ಜಿಲ್ಲೆ): ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಆರೋಪಿ ಮಹಮ್ಮದ್ ಶಫಿ ನಾಶಿಪುಡಿ ಎಂಬುವರನ್ನು ಬುಧವಾರ ತಡರಾತ್ರಿ ತಾಲ್ಲೂಕಿನ ಮೋಟೆಬೆನ್ನೂರ ಬಳಿಯಿರುವ ಎಸ್.ಎ.ಎನ್.ಕೋಲ್ಡ್ ಸ್ಟೋರೇಜ್ನಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದರು.</p>.<p>‘ಬ್ಯಾಡಗಿ ಹಾಗೂ ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು, ಧ್ವನಿ ಪರೀಕ್ಷೆ ಮತ್ತು ವಿಚಾರಣೆಗಾಗಿ ಆರೋಪಿಯನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ. </p>.<p>‘ಹಲವು ವರ್ಷಗಳಿಂದ ಬ್ಯಾಡಗಿಯಲ್ಲಿ ಮೆಣಸಿನಕಾಯಿ ವರ್ತಕ ಆಗಿರುವ ನಾಶಿಪುಡಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು’ ಎಂದು ಬಿಜೆಪಿ ಮುಖಂಡರು ಬುಧವಾರ ಪೊಲೀಸರಿಗೆ ದೂರು ಸಲ್ಲಿಸಿದ್ದರು.</p>.<p>Quote - ಶ್ರೀರಾಮುಲು ಕೋಟ್ ದೇಶದ್ರೋಹಿಗಳಿಗೆ ರಕ್ಷಣೆ ನೀಡುವುದು ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ. ಪಾಕಿಸ್ತಾನ್ ಪರ ಘೋಷಣೆ ಕೂಗುವವರು ಭಾರತ ಬಿಟ್ಟು ಅಲ್ಲಿಯೇ ಹೋಗಲಿ. ಅಂಥವರ ವಿಮಾನ ಪ್ರಯಾಣದ ಖರ್ಚು ನಾವೇ ಕೊಡುತ್ತೇವೆ. –ಬಿ.ಶ್ರೀರಾಮುಲು ಬಿಜೆಪಿ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>