ಉಕ್ರೇನ್ನಲ್ಲಿ ಮೃತಪಟ್ಟ ನವೀನ ಗ್ಯಾನಗೌಡರ ದೇಹದಾನಕ್ಕೆ ಕುಟುಂಬಸ್ಥರ ತೀರ್ಮಾನ

ಹಾವೇರಿ: ಉಕ್ರೇನ್ನಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ ಗ್ಯಾನಗೌಡರ ಮೃತದೇಹವನ್ನು ದಾವಣಗೆರೆಯ ಎಸ್.ಎಸ್.ಆಸ್ಪತ್ರೆಗೆ ದಾನ ಮಾಡಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
‘ಸೋಮವಾರ ಬೆಳಿಗ್ಗೆ 9 ಗಂಟೆಗೆ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ಮಗನ ಪಾರ್ಥಿವ ಶರೀರ ತಲುಪುತ್ತದೆ. ನಂತರ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುವುದು. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ತಿಳಿಸಿದರು.
ಉಕ್ರೇನ್ನಲ್ಲಿ ಮೃತಪಟ್ಟ ನವೀನ್ ಪಾರ್ಥಿವ ಶರೀರ 21ರಂದು ತಾಯ್ನಾಡಿಗೆ: ಸಿಎಂ
‘ನನ್ನ ಮಗ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎಂಬ ಆಸೆ ಹೊಂದಿದ್ದ. ಆ ಆಸೆ ಈಡೇರಲಿಲ್ಲ. ಬೇರೆ ವೈದ್ಯಕೀಯ ವಿದ್ಯಾರ್ಥಿಗಳ ಮುಖಾಂತರವಾದರೂ ಅವನ ಮೃತದೇಹ ವೈದ್ಯಕೀಯ ಕ್ಷೇತ್ರಕ್ಕೆ ಬಳಕೆಯಾಗಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಂಡಿದ್ದೇವೆ’ ಎಂದು ನುಡಿದರು.
ಖಾರ್ಕೀವ್: ರಷ್ಯಾ ಪಡೆಗಳ ಕ್ಷಿಪಣಿ ದಾಳಿ; ಕರ್ನಾಟಕದ ವಿದ್ಯಾರ್ಥಿ ಸಾವು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.