ಹಾವೇರಿ: ರೈತರ ಮನೆ ಬಾಗಿಲಿಗೆ ತೆರಳಿ, ಪಶುಗಳಿಗೆ ಸಕಾಲದಲ್ಲಿ ತುರ್ತು ಚಿಕಿತ್ಸೆ ನೀಡುವ ‘ಪಶು ಸಂಜೀವಿನಿ’ ಯೋಜನೆಯ ಹೊಸ ಆಂಬುಲೆನ್ಸ್ಗಳಿಗೆ ರಾಜ್ಯದ ವಿವಿಧೆಡೆ ಹಂತ–ಹಂತವಾಗಿ ಚಾಲನೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರದಿಂದ ₹ 44 ಕೋಟಿ ಅನುದಾನದಲ್ಲಿ ರಾಜ್ಯಕ್ಕೆ ಒಟ್ಟು 290 ಪಶು ಸಂಜೀವಿನಿ ಆಂಬುಲೆನ್ಸ್ಗಳು ಮಂಜೂರಾಗಿದ್ದವು. 2022ರ ಜುಲೈನಲ್ಲಿ ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿಗೆ ಒಂದು ಆಂಬುಲೆನ್ಸ್ ಸೌಲಭ್ಯ ನೀಡಿತ್ತು.
‘ಪಶುಗಳಲ್ಲಿ ಕಾಣಿಸಿಕೊಳ್ಳುವ ಕೆಚ್ಚಲಬಾವು, ಪ್ರಸವ ಚಿಕಿತ್ಸೆ ಮತ್ತು ಗರ್ಭಪಾತ, ಹೊಟ್ಟೆ ಉಬ್ಬರ, ಅಪಘಾತ, ವಿಷಪೂರಿತ ಮೇವು ಸೇವನೆ, ಜೇನು ಹುಳುಗಳ ಕಡಿತ, ಗಂಟಲು ಬೇನೆ, ಚಪ್ಪೆ ರೋಗ, ಮೂಳೆ ಮುರಿತ, ಉಣ್ಣೆ ಜ್ವರ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ಕೊಡಿಸಬಹುದು’ ಎಂದು ಹಾವೇರಿಯ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಸ್.ವಿ.ಸಂತಿ ತಿಳಿಸಿದ್ದಾರೆ.