ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಪ್ರಭಾರ ಅಧ್ಯಕ್ಷ ಈಶ್ವರಪ್ಪ ಬಿ.ಎಸ್ ಹಾಗೂ ಸದಸ್ಯೆ ಉಮಾದೇವಿ ಎಸ್.ಹಿರೇಮಠ ಅವರು ಕಬ್ಬಿನಬೆಳೆ ಹಾನಿಗಾಗಿ ₹6,19,500 ಹಾಗೂ ಬೋರವೆಲ್ ಪರಿಕರ ಹಾನಿಗಾಗಿ ₹25 ಸಾವಿರ ಸೇರಿ ₹6,44,500 ಪರಿಹಾರವನ್ನು 30 ದಿನದೊಳಗಾಗಿ ನೀಡಲು ಹಾಗೂ ಮಾನಸಿಕ ಹಾಗೂ ದೈಹಿಕ ವ್ಯಥೆಗೆ ₹3 ಸಾವಿರ, ಪ್ರಕರಣದ ಖರ್ಚು ₹2 ಸಾವಿರಗಳನ್ನು ಪಾವತಿಸಲು ಹೆಸ್ಕಾಂಗೆ ಆದೇಶಿಸಿದ್ದಾರೆ.