<p><strong>ಹಾವೇರಿ</strong>: ಇಲ್ಲಿಯ ಹಾನಗಲ್ ರಸ್ತೆಯ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಗೋದಾಮು ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 633 ಕ್ವಿಂಟಲ್ (6.33 ಟನ್) ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.</p>.<p>‘ಖಚಿತ ಮಾಹಿತಿ ಮೇರೆಗೆ ಗೋದಾಮು ಬಳಿ ಪರಿಶೀಲನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ₹ 14.68 ಲಕ್ಷ ಮೌಲ್ಯದ ಪಡಿತರ ಅಕ್ಕಿ ಹಾಗೂ ₹ 1.28 ಲಕ್ಷ ಮೌಲ್ಯದ 50 ಕ್ವಿಂಟಲ್ 20 ಕೆ.ಜಿ ಗೋಧಿ ಪತ್ತೆಯಾಗಿದೆ. ಈ ಪಡಿತರವನ್ನು ಆರೋಪಿ ಸಚಿನ್ ಕಬ್ಬೂರ ಎಂಬಾತ ಸಂಗ್ರಹಿಸಿದ್ದನೆಂಬ ಮಾಹಿತಿ ಇದೆ. ಆತನ ವಿರುದ್ಧ ಹಾವೇರಿ ಶಹರ ಠಾಣೆಗೆ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಾಗಿದೆ’ ಎಂದು ಆಹಾರ ಇಲಾಖೆ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ನೀಡಲು ಅಕ್ಕಿ ಹಾಗೂ ಗೋಧಿ ಪೂರೈಸಲಾಗಿತ್ತು. ಅದೇ ಅಕ್ಕಿ ಹಾಗೂ ಗೋಧಿಯನ್ನು ಕಳ್ಳಸಂತೆಯಲ್ಲಿ ಮಾರುವುದಕ್ಕಾಗಿ ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿತ್ತು’ ಎಂದರು.</p>.<p>‘ಆರೋಪಿ ಸಚಿನ್, ಹಲವು ಬಾರಿ ಪಡಿತರ ಅಕ್ಕಿ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಹುಬ್ಬಳ್ಳಿಯಲ್ಲೂ ಈತನನ್ನು ಪೊಲೀಸರು ಬಂಧಿಸಿದ್ದರು. ಈತ ಪದೇ ಪದೇ ಕೃತ್ಯ ಎಸಗುತ್ತಿದ್ದಾನೆ. ಪಡಿತರವಿದ್ದ ಮೂರು ಲಾರಿಗಳನ್ನು ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಇಲ್ಲಿಯ ಹಾನಗಲ್ ರಸ್ತೆಯ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಗೋದಾಮು ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 633 ಕ್ವಿಂಟಲ್ (6.33 ಟನ್) ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.</p>.<p>‘ಖಚಿತ ಮಾಹಿತಿ ಮೇರೆಗೆ ಗೋದಾಮು ಬಳಿ ಪರಿಶೀಲನೆ ನಡೆಸಲಾಯಿತು. ಇದೇ ಸಂದರ್ಭದಲ್ಲಿ ₹ 14.68 ಲಕ್ಷ ಮೌಲ್ಯದ ಪಡಿತರ ಅಕ್ಕಿ ಹಾಗೂ ₹ 1.28 ಲಕ್ಷ ಮೌಲ್ಯದ 50 ಕ್ವಿಂಟಲ್ 20 ಕೆ.ಜಿ ಗೋಧಿ ಪತ್ತೆಯಾಗಿದೆ. ಈ ಪಡಿತರವನ್ನು ಆರೋಪಿ ಸಚಿನ್ ಕಬ್ಬೂರ ಎಂಬಾತ ಸಂಗ್ರಹಿಸಿದ್ದನೆಂಬ ಮಾಹಿತಿ ಇದೆ. ಆತನ ವಿರುದ್ಧ ಹಾವೇರಿ ಶಹರ ಠಾಣೆಗೆ ದೂರು ನೀಡಲಾಗಿದ್ದು, ಎಫ್ಐಆರ್ ದಾಖಲಾಗಿದೆ’ ಎಂದು ಆಹಾರ ಇಲಾಖೆ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ನೀಡಲು ಅಕ್ಕಿ ಹಾಗೂ ಗೋಧಿ ಪೂರೈಸಲಾಗಿತ್ತು. ಅದೇ ಅಕ್ಕಿ ಹಾಗೂ ಗೋಧಿಯನ್ನು ಕಳ್ಳಸಂತೆಯಲ್ಲಿ ಮಾರುವುದಕ್ಕಾಗಿ ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿತ್ತು’ ಎಂದರು.</p>.<p>‘ಆರೋಪಿ ಸಚಿನ್, ಹಲವು ಬಾರಿ ಪಡಿತರ ಅಕ್ಕಿ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಹುಬ್ಬಳ್ಳಿಯಲ್ಲೂ ಈತನನ್ನು ಪೊಲೀಸರು ಬಂಧಿಸಿದ್ದರು. ಈತ ಪದೇ ಪದೇ ಕೃತ್ಯ ಎಸಗುತ್ತಿದ್ದಾನೆ. ಪಡಿತರವಿದ್ದ ಮೂರು ಲಾರಿಗಳನ್ನು ಜಪ್ತಿ ಮಾಡಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>