ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಬಲಿಷ್ಠವಾಗಿವೆ. ಸರೋಜಿನಿ ಮಹಿಷಿ ವರದಿಯನ್ನು ರಾಷ್ಟ್ರೀಯ ಪಕ್ಷಗಳು ಅನುಷ್ಠಾನಕ್ಕೆ ತಂದಿಲ್ಲ. ಕರ್ನಾಟಕವು ರಾಷ್ಟ್ರೀಯ ಪಕ್ಷಗಳಿಗೆ ವೋಟ್ ಬ್ಯಾಂಕ್ ಆಗಿದೆ. ದೇಶಕ್ಕೆ ಅತಿ ಹೆಚ್ಚು ಜಿಎಸ್ಟಿ ಕಟ್ಟುವ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಆ ಹಣವನ್ನು ರಾಜ್ಯಕ್ಕೆ ನೀಡದೆ ಕೇಂದ್ರ ಸರ್ಕಾರ ಅನ್ಯಾಯ ಎಸಗಿದೆ ಎಂದು ಕಿಡಿಕಾರಿದರು.