ಅಕ್ಕಿಆಲೂರ: ‘ಈ ಸರ್ಕಾರ ಹೆಜ್ಜೆ ಹೆಜ್ಜೆಗೂ ಬಡವರನ್ನು ತುಳಿದಿದೆ. ಬೆಲೆ ಏರಿಕೆಯಿಂದ ಜನಜೀವನ ಕಷ್ಟವಾಗಿದೆ. ಆದಾಯಕ್ಕೆ ಕೊಡಲಿ ಏಟು ಬಿದ್ದಿದೆ. ಈ ಬಾರಿ ಹಾನಗಲ್ ಉಪ ಚುನಾವಣೆಯಲ್ಲಿ ಮತದಾರರು ಕಿಚ್ಚು, ಸಿಟ್ಟಿನಿಂದ ಸೇಡು ತೀರಿಸಿಕೊಳ್ಳಲಿದ್ದು, ಜನವಿರೋಧಿ ಬಿಜೆಪಿಗೆ ಬುದ್ಧಿ ಕಲಿಸಲಿದ್ದಾರೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಹೇಳಿದರು.
ಶನಿವಾರ ಮಾರನಬೀಡ, ಉಪ್ಪುಣಸಿ ಹಾಗೂ ಕರಗುದರಿ ಗ್ರಾಮಗಳಲ್ಲಿ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು.
ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮಾತನಾಡಿ, ಶ್ರೀನಿವಾಸ ಮಾನೆ ಪ್ರಾಮಾಣಿಕವಾಗಿ ಜನಸೇವೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ಶ್ರೀನಿವಾಸ್ ಮಾನೆ ಅವರಂಥ ಯುವ ನಾಯಕತ್ವದ ಅಗತ್ಯವಿದೆ ಎಂದರು.
ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವರಾದ ಮನೋಹರ ತಹಸೀಲ್ದಾರ್, ಸಂತೋಷ್ ಲಾಡ್, ವಿನಯ ಕುಲಕರ್ಣಿ, ಶಿವಶಂಕರ ರೆಡ್ಡಿ, ತುಕಾರಾಮ್, ಸೋಮಣ್ಣ ಬೇವಿನಮರದ, ಎಂ.ಎಂ.ಹಿರೇಮಠ, ಪುಟ್ಟಪ್ಪ ನರೇಗಲ್ ಇದ್ದರು.