ಈ ವೇಳೆ ಮಾತನಾಡಿದ ಪ್ರತಿಭಟನಾಕಾರ, ಕಳೆದ ಒಂದು ತಿಂಗಳಿಂದ ಮನೆಯ ಹಿತ್ತಲಿನಲ್ಲಿ ವಿಪರೀತ ಹಂದಿಗಳ ಕಾಟ ಹೆಚ್ಚಾಗಿದೆ. ಪತ್ನಿ, ಮಕ್ಕಳು ಹಂದಿಗಳ ಕಾಟದಿಂದ ಮನೆಯಿಂದ ಹಿತ್ತಲಕ್ಕೆ ಶೌಚಕ್ಕೆ ಬರಲು ಹೆದರುತ್ತಿದ್ದಾರೆ. ಮಕ್ಕಳು ಹಂದಿಗಳಿಗೆ ಹೆದರಿ ಮನೆಯಲ್ಲಿ ಮಲ-ಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಹಂದಿಗಳು ಹಿತ್ತಲಿಲ್ಲಿ ಮರಿಹಾಕಿದ್ದು, ಓಡಿಸಲು ಹೋದರೆ ಕಚ್ಚಲು ಮೈಮೇಲೆ ಬರುತ್ತವೆ. ಮನೆಯ ಹಿತ್ತಲಿನಲ್ಲಿ ಶೇಖರಿಸಿಟ್ಟ ಜೋಳವನ್ನು ಹಾಳು ಮಾಡಿವೆ ಎಂದು ಅಳಲು ತೋಡಿಕೊಂಡರು.