ರಾಣೇಬೆನ್ನೂರು ಶಹರ ವೃತ್ತದ ತನಿಖಾಧಿಕಾರಿ ಸಿಪಿಐ ಎಂ.ಐ. ಗೌಡಪ್ಪಗೌಡ್ರ ಅವರು ತನಿಖೆ ನಡೆಸಿ, ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳ ಮೇಲೆ ಆರೋಪ ರುಜುವಾತಾಗಿದ್ದು ಆರೋಪಿ ದಂಡದ ಹಣದಲ್ಲಿ ನೊಂದ ಬಾಲಕಿಗೆ ₹2.50 ಲಕ್ಷ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ರಾಜ್ಯ ಸರ್ಕಾರದಿಂದ ನೊಂದ ಬಾಲಕಿಗೆ 4 ಲಕ್ಷ ಪರಿಹಾರವನ್ನು ನೀಡಬೇಕೆಂದು ತೀರ್ಪು ನೀಡಿ ಆದೇಶ ಮಾಡಿದ್ದಾರೆ.