<p>ಕುಮಾರಪಟ್ಟಣ: ಸಮೀಪದ ಹುಲಿಕಟ್ಟಿ ಗ್ರಾಮದಲ್ಲಿ ಶುಕ್ರವಾರ ಕೊರೊನಾ ಸೋಂಕು ನಿವಾರಣೆಗಾಗಿ ಏಕನಾಥೇಶ್ವರಿ, ದುರ್ಗಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಕೊರೊನಮ್ಮದೇವಿ ಹೆಸರಿನಲ್ಲಿ ಅಭಿಷೇಕ, ಹೋಮ ಹಾಗೂ ಪೂಜಾ ಕಾರ್ಯಕ್ರಮ ನೆರವೇರಿತು.</p>.<p>ಎರಡು ವರ್ಷಗಳಿಂದ ಜನರ ಪ್ರಾಣವನ್ನು ಹಿಂಡುತ್ತಿರುವ ಕೊರೊನಾ ಸೋಂಕು ತೊಲಗಿಸಲು ದೇವರುಗಳಿಗೆ ಶಾಂತಿ ಮಾಡಲಾಗಿದೆ. ಗೊರವಯ್ಯ ಹಾಗೂ ಜೋಗತಿಯರನ್ನು ಕರೆಸಿ ಪಡ್ಡಲಿಗೆ ತುಂಬಿಸಲಾಯಿತು ಎಂದು ಕೆಲ ಗ್ರಾಮಸ್ಥರು ತಿಳಿಸಿದರು.</p>.<p>ಗ್ರಾಮಸ್ಥರೆಲ್ಲಾ ಕೂಡಿ ಮನೆ ಮನೆಗೆ ಪಟ್ಟಿ ಹಾಕಿ ಸಂಗ್ರಹಿಸಿದ ಹಣದಲ್ಲಿ ಗ್ರಾಮದ ಎಲ್ಲ ಗಂಡು ಮತ್ತು ಹೆಣ್ಣು ದೇವತೆಗಳಿಗೆ<br />ವಿಶೇಷ ಅಭಿಷೇಕ ಪೂಜೆ ನೆರವೇರಿಸಲಾಯಿತು ಎಂದರು. ಕಾರ್ಯಕ್ರಮ ಮುಗಿದ ಬಳಿಕ ಬಂದಂತಹ ಜನರಿಗೆ ಪ್ರಸಾದ ವಿತರಿಸಲಾಗಿದೆ.</p>.<p>ಅಧಿಕ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಕೆಲವರು ಮಾಸ್ಕ್ ಧರಿಸದೆ ದೈಹಿಕ ಅಂತರ ಮರೆತು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಮಾರಪಟ್ಟಣ: ಸಮೀಪದ ಹುಲಿಕಟ್ಟಿ ಗ್ರಾಮದಲ್ಲಿ ಶುಕ್ರವಾರ ಕೊರೊನಾ ಸೋಂಕು ನಿವಾರಣೆಗಾಗಿ ಏಕನಾಥೇಶ್ವರಿ, ದುರ್ಗಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಕೊರೊನಮ್ಮದೇವಿ ಹೆಸರಿನಲ್ಲಿ ಅಭಿಷೇಕ, ಹೋಮ ಹಾಗೂ ಪೂಜಾ ಕಾರ್ಯಕ್ರಮ ನೆರವೇರಿತು.</p>.<p>ಎರಡು ವರ್ಷಗಳಿಂದ ಜನರ ಪ್ರಾಣವನ್ನು ಹಿಂಡುತ್ತಿರುವ ಕೊರೊನಾ ಸೋಂಕು ತೊಲಗಿಸಲು ದೇವರುಗಳಿಗೆ ಶಾಂತಿ ಮಾಡಲಾಗಿದೆ. ಗೊರವಯ್ಯ ಹಾಗೂ ಜೋಗತಿಯರನ್ನು ಕರೆಸಿ ಪಡ್ಡಲಿಗೆ ತುಂಬಿಸಲಾಯಿತು ಎಂದು ಕೆಲ ಗ್ರಾಮಸ್ಥರು ತಿಳಿಸಿದರು.</p>.<p>ಗ್ರಾಮಸ್ಥರೆಲ್ಲಾ ಕೂಡಿ ಮನೆ ಮನೆಗೆ ಪಟ್ಟಿ ಹಾಕಿ ಸಂಗ್ರಹಿಸಿದ ಹಣದಲ್ಲಿ ಗ್ರಾಮದ ಎಲ್ಲ ಗಂಡು ಮತ್ತು ಹೆಣ್ಣು ದೇವತೆಗಳಿಗೆ<br />ವಿಶೇಷ ಅಭಿಷೇಕ ಪೂಜೆ ನೆರವೇರಿಸಲಾಯಿತು ಎಂದರು. ಕಾರ್ಯಕ್ರಮ ಮುಗಿದ ಬಳಿಕ ಬಂದಂತಹ ಜನರಿಗೆ ಪ್ರಸಾದ ವಿತರಿಸಲಾಗಿದೆ.</p>.<p>ಅಧಿಕ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಕೆಲವರು ಮಾಸ್ಕ್ ಧರಿಸದೆ ದೈಹಿಕ ಅಂತರ ಮರೆತು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>