<p><strong>ಹಾವೇರಿ:</strong> ‘ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಬಾಲಕಿ ಕೂಡಿಟ್ಟು ಹಿಂಸಿಸಿದ್ದ ಪ್ರಕರಣದ ತನಿಖೆ ಮಾಡುತ್ತಿರುವ ಪೊಲೀಸರು, ಮತ್ತಷ್ಟು ಸಂತ್ರಸ್ತ ಬಾಲಕಿಯರ ಪ್ರಕರಣಗಳನ್ನು ಮುಚ್ಚಿಹಾಕಲು ಹುನ್ನಾರ ನಡೆಸುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಮಾಯಕ ಬಾಲಕಿಯರು ಹಾಗೂ ಯುವತಿಯರನ್ನು ಆಮಿಷವೊಡ್ಡಿ ಕರೆತಂದು ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು’ ಎಂದರು.</p>.<p>‘ಬಾಲಕಿಯ ಅಕ್ರಮ ಬಂಧನ ಪ್ರಕರಣದಲ್ಲಿ ಆರೋಪಿ ಲಕ್ಕವ್ವ ಬೆಟಗೇರಿ ಅವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದರೆ, ಅವರ ಸಹೋದರ ಹಾಗೂ ಪುತ್ರಿ ಸಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ಬ್ಯಾಗವಾದಿ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಾಗಿದೆ. ಆರೋಪಿ ಲಕ್ಕವ್ವ ಹಾಗೂ ಸಂಬಂಧಿಕರು, ಹಲವು ವರ್ಷಗಳಿಂದ ಯುವತಿಯರ ಮಾರಾಟದಲ್ಲಿ ತೊಡಗಿದ್ದಾರೆ. ಎರಡು ವರ್ಷದಲ್ಲಿ ಆರೋಪಿಗಳ ಆಸ್ತಿಯೂ ದುಪ್ಪಟ್ಟಾಗಿದೆ. ಆರೋಪಿಯ ಕೃತ್ಯಕ್ಕೆ ತಾಲ್ಲೂಕಿನ ಪ್ರಭಾವಿಗಳು ಹಾಗೂ ಪೊಲೀಸರ ಬೆಂಬಲವಿರುವ ಆರೋಪವೂ ಇದೆ’ ಎಂದರು.</p>.<p>‘ಹುಬ್ಬಳ್ಳಿಯ 13 ವರ್ಷದ ಬಾಲಕಿಯ ಕೂದಲು ಕತ್ತರಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದರು. ಹಲ್ಲೆ ಸಹ ಮಾಡಿದ್ದಾರೆ. ಈ ಬಾಲಕಿಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಆದರೆ, ಚಿಕ್ಕಮಗಳೂರಿನ ಯುವತಿಯನ್ನೂ ಆರೋಪಿ ಅಕ್ರಮ ಬಂಧನದಲ್ಲಿಟ್ಟಿದ್ದರು. ಈ ವಿಷಯವನ್ನು ಪೊಲೀಸರು ಮುಚ್ಚಿ ಹಾಕುವ ಹುನ್ನಾರ ನಡೆಸಿದ್ದಾರೆ. ಕೇವಲ 13 ವರ್ಷದ ಬಾಲಕಿಯ ಕೂಡಿ ಹಾಕಿದ್ದ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಳಿದ ಸಂತ್ರಸ್ತರ ಪ್ರಕರಣಗಳನ್ನು ಕಡೆಗಣಿಸಿದ್ದಾರೆ. ಇದನ್ನು ಪ್ರಶ್ನಿಸುವವರ ಮೇಲೆ ಹಲ್ಲೆ ನಡೆಯುತ್ತಿದೆ. ಇದರ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಹೇಳಿದರು.</p>.<p>ಮುಖಂಡ ಶಿವರಾಜ ಸಜ್ಜನರ ಮಾತನಾಡಿ, ‘ಜಿಲ್ಲೆಯಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರವೇ ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮೌನವಾಗಿದ್ದಾರೆ’ ಎಂದು ದೂರಿದರು.</p>.<p>‘ಜಿಲ್ಲೆಯಲ್ಲಿ ಅಪರಾಧಗಳು ಹೆಚ್ಚಾಗಿ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟರೂ ಕಾಂಗ್ರೆಸ್ನ ಆರು ಶಾಸಕರು ಮಾತನಾಡುತ್ತಿಲ್ಲ. ಜಿಲ್ಲೆಯಲ್ಲಿ ಜೂಜಾಟ, ಮಟ್ಕಾ, ಮದ್ಯ ಅಕ್ರಮ ಮಾರಾಟ ಹೆಚ್ಚಾಗಿದೆ. ಪ್ರತಿ ತಿಂಗಳು ಜೂಜುಕೋರರಿಂದ, ಪ್ರತಿ ತಾಲ್ಲೂಕಿನಲ್ಲಿ ₹ 25 ಲಕ್ಷ ಹಫ್ತಾ ಹೋಗುತ್ತಿದೆ. ಶಾಸಕರು, ಸಚಿವರು ಕೇವಲ ಆದಾಯ ನೋಡುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ’ ಎಂದು ಹೇಳಿದರು.</p>.<p>ಮುಖಂಡರಾದ ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ಶೋಭಾ ನಿಸ್ಸಿಮಗೌಡ್ರ, ಬಸವರಾಜ ಅರಬಗೊಂಡ, ಪರಮೇಶ್ವರಪ್ಪ ಮೇಗಳಮನಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಜಗದೀಶ ಬಸೇಗೆಣ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ಜಿಲ್ಲೆಯ ಹಾನಗಲ್ ತಾಲ್ಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಬಾಲಕಿ ಕೂಡಿಟ್ಟು ಹಿಂಸಿಸಿದ್ದ ಪ್ರಕರಣದ ತನಿಖೆ ಮಾಡುತ್ತಿರುವ ಪೊಲೀಸರು, ಮತ್ತಷ್ಟು ಸಂತ್ರಸ್ತ ಬಾಲಕಿಯರ ಪ್ರಕರಣಗಳನ್ನು ಮುಚ್ಚಿಹಾಕಲು ಹುನ್ನಾರ ನಡೆಸುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಮಾಯಕ ಬಾಲಕಿಯರು ಹಾಗೂ ಯುವತಿಯರನ್ನು ಆಮಿಷವೊಡ್ಡಿ ಕರೆತಂದು ಮಾರಾಟ ಮಾಡುವ ಜಾಲ ಸಕ್ರಿಯವಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು’ ಎಂದರು.</p>.<p>‘ಬಾಲಕಿಯ ಅಕ್ರಮ ಬಂಧನ ಪ್ರಕರಣದಲ್ಲಿ ಆರೋಪಿ ಲಕ್ಕವ್ವ ಬೆಟಗೇರಿ ಅವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆದರೆ, ಅವರ ಸಹೋದರ ಹಾಗೂ ಪುತ್ರಿ ಸಹ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>‘ಬ್ಯಾಗವಾದಿ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಾಗಿದೆ. ಆರೋಪಿ ಲಕ್ಕವ್ವ ಹಾಗೂ ಸಂಬಂಧಿಕರು, ಹಲವು ವರ್ಷಗಳಿಂದ ಯುವತಿಯರ ಮಾರಾಟದಲ್ಲಿ ತೊಡಗಿದ್ದಾರೆ. ಎರಡು ವರ್ಷದಲ್ಲಿ ಆರೋಪಿಗಳ ಆಸ್ತಿಯೂ ದುಪ್ಪಟ್ಟಾಗಿದೆ. ಆರೋಪಿಯ ಕೃತ್ಯಕ್ಕೆ ತಾಲ್ಲೂಕಿನ ಪ್ರಭಾವಿಗಳು ಹಾಗೂ ಪೊಲೀಸರ ಬೆಂಬಲವಿರುವ ಆರೋಪವೂ ಇದೆ’ ಎಂದರು.</p>.<p>‘ಹುಬ್ಬಳ್ಳಿಯ 13 ವರ್ಷದ ಬಾಲಕಿಯ ಕೂದಲು ಕತ್ತರಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದರು. ಹಲ್ಲೆ ಸಹ ಮಾಡಿದ್ದಾರೆ. ಈ ಬಾಲಕಿಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಆದರೆ, ಚಿಕ್ಕಮಗಳೂರಿನ ಯುವತಿಯನ್ನೂ ಆರೋಪಿ ಅಕ್ರಮ ಬಂಧನದಲ್ಲಿಟ್ಟಿದ್ದರು. ಈ ವಿಷಯವನ್ನು ಪೊಲೀಸರು ಮುಚ್ಚಿ ಹಾಕುವ ಹುನ್ನಾರ ನಡೆಸಿದ್ದಾರೆ. ಕೇವಲ 13 ವರ್ಷದ ಬಾಲಕಿಯ ಕೂಡಿ ಹಾಕಿದ್ದ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಳಿದ ಸಂತ್ರಸ್ತರ ಪ್ರಕರಣಗಳನ್ನು ಕಡೆಗಣಿಸಿದ್ದಾರೆ. ಇದನ್ನು ಪ್ರಶ್ನಿಸುವವರ ಮೇಲೆ ಹಲ್ಲೆ ನಡೆಯುತ್ತಿದೆ. ಇದರ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಹೇಳಿದರು.</p>.<p>ಮುಖಂಡ ಶಿವರಾಜ ಸಜ್ಜನರ ಮಾತನಾಡಿ, ‘ಜಿಲ್ಲೆಯಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರವೇ ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮೌನವಾಗಿದ್ದಾರೆ’ ಎಂದು ದೂರಿದರು.</p>.<p>‘ಜಿಲ್ಲೆಯಲ್ಲಿ ಅಪರಾಧಗಳು ಹೆಚ್ಚಾಗಿ, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟರೂ ಕಾಂಗ್ರೆಸ್ನ ಆರು ಶಾಸಕರು ಮಾತನಾಡುತ್ತಿಲ್ಲ. ಜಿಲ್ಲೆಯಲ್ಲಿ ಜೂಜಾಟ, ಮಟ್ಕಾ, ಮದ್ಯ ಅಕ್ರಮ ಮಾರಾಟ ಹೆಚ್ಚಾಗಿದೆ. ಪ್ರತಿ ತಿಂಗಳು ಜೂಜುಕೋರರಿಂದ, ಪ್ರತಿ ತಾಲ್ಲೂಕಿನಲ್ಲಿ ₹ 25 ಲಕ್ಷ ಹಫ್ತಾ ಹೋಗುತ್ತಿದೆ. ಶಾಸಕರು, ಸಚಿವರು ಕೇವಲ ಆದಾಯ ನೋಡುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ’ ಎಂದು ಹೇಳಿದರು.</p>.<p>ಮುಖಂಡರಾದ ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ಶೋಭಾ ನಿಸ್ಸಿಮಗೌಡ್ರ, ಬಸವರಾಜ ಅರಬಗೊಂಡ, ಪರಮೇಶ್ವರಪ್ಪ ಮೇಗಳಮನಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಜಗದೀಶ ಬಸೇಗೆಣ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>