ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ ಕಾನೂನಾತ್ಮಕ ಬದಲಾವಣೆ ತರಬೇಕಾಗಿದೆ. ಹಾವೇರಿ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಕೊರತೆ ಇದ್ದರೂ ಸರ್ಕಾರ ಜಾಣ ಕುರುಡನಂತೆ ವರ್ತಿಸುತ್ತಿದೆ. ಕಳೆದ 5 ವರ್ಷದಿಂದ ಸಮಪರ್ಕವಾಗಿ ಬೆಳೆ ವಿಮೆ, ಬೆಳೆ ಪರಿಹಾರ ವಿತರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಪಾಟೀಲ ಆರೋಪಿಸಿದರು. ಹರಿಹರಗೌಡ ಪಾಟೀಲ, ಬಸವರಾಜ ಕೊಂಗಿ, ಸುರೇಶಪ್ಪ ಗರಡೀಮನಿ, ವೀರೇಶ್, ಎಸ್.ಡಿ. ಹಿರೇಮಠ ಇದ್ದರು.