ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ ಶಾಲಾ ಕೊಠಡಿಯಿಂದ ಸಂತ್ರಸ್ತರ ಸ್ಥಳಾಂತರ

‘ಪ್ರಜಾವಾಣಿ’ ವರದಿ ಬಳಿಕ ಪರ್ಯಾಯ ವ್ಯವಸ್ಥೆ
Last Updated 21 ಆಗಸ್ಟ್ 2019, 20:01 IST
ಅಕ್ಷರ ಗಾತ್ರ

ಹಾವೇರಿ: ಕುಣಿಮೆಳ್ಳಿಹಳ್ಳಿ ಸರ್ಕಾರಿ ಶಾಲೆಯಲ್ಲಿ ತೆರೆಯಲಾಗಿದ್ದ ಪರಿಹಾರ ಕೇಂದ್ರದಿಂದ ಮಕ್ಕಳ ಕಲಿಕೆಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಜಿಲ್ಲಾಡಳಿತವು ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸಂತ್ರಸ್ತರನ್ನು ಶಾಲಾ ಕಟ್ಟಡದಿಂದ ಸ್ಥಳಾಂತರ ಮಾಡಿದೆ. ಬುಧವಾರ ತರಗತಿಗಳು ನಡೆದವು.

ಪರಿಹಾರ ಕೇಂದ್ರದಲ್ಲಿ 15 ಕುಟುಂಬಗಳು ವಾಸವಿದ್ದವು. ಮಂಗಳವಾರ ಬೆಳಿಗ್ಗೆ ಕೇಂದ್ರದ ಬಳಿ ಬಂದು ಗಲಾಟೆ ಮಾಡಿದ್ದ ಗ್ರಾಮಸ್ಥರ ಗುಂಪು, ಮಕ್ಕಳ ಕಲಿಕೆ ದೃಷ್ಟಿಯಿಂದ ಸಂತ್ರಸ್ತರನ್ನು 24 ತಾಸಿನೊಳಗೆ ಸ್ಥಳಾಂತರಿಸಬೇಕು ಎಂದು ಗಡುವು ನೀಡಿತ್ತು. ಈ ಕುರಿತು ‘ಪರಿಹಾರ ಕೇಂದ್ರ ಬಿಡಲು ಡೆಡ್‌ಲೈನ್’ ಶೀರ್ಷಿಕೆಯಡಿ‘ಪ್ರಜಾವಾಣಿ’ಯಲ್ಲಿ ಬುಧವಾರ ಸುದ್ದಿ ಪ್ರಕಟವಾಗಿತ್ತು.

ವರದಿ ಬಳಿಕ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿಯವರು, ಉಪ‍ ವಿಭಾಗಾಧಿಕಾರಿ ಹಾಗೂ ಸವಣೂರು ತಹಶೀಲ್ದಾರ್‌ ಅವರನ್ನು ಗ್ರಾಮಕ್ಕೆ ಕಳುಹಿಸಿ ಮಾಹಿತಿ ಪಡೆದುಕೊಂಡರು. ಅಲ್ಲದೇ, ಸಂತ್ರಸ್ತರಿಗೆ ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸುವಂತೆಯೂ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT