<p><strong>ಹಾವೇರಿ:</strong> ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ನಗರದ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಪುನರಾರಂಭಗೊಂಡಿದೆ. </p>.<p>2017ರಲ್ಲಿ ನಗರದ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿತ್ತು. ನವಪ್ರಯಾಸ ನವದೆಹಲಿ ಸಂಸ್ಥೆಯವರು 2019ರಿಂದ ಗುತ್ತಿಗೆ ಆಧಾರದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಗುತ್ತಿಗೆದಾರರು 6 ತಿಂಗಳಿಂದ ಬಿಲ್ ಸಲ್ಲಿಸದ ಕಾರಣ ಅನುದಾನ ಬಿಡುಗಡೆಯಾಗದೇ ಕ್ಯಾಂಟೀನ್ ಬಂದ್ ಆಗಿತ್ತು. </p>.<p>ಇಂದಿರಾ ಕ್ಯಾಂಟೀನ್ ಬಂದ್ ಆಗಿದ್ದರಿಂದ, ಹಾವೇರಿ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಗಳು, ಸಂತೆ ಮತ್ತು ತರಕಾರಿ ಮಾರುಕಟ್ಟೆಗೆ ಬರುತ್ತಿದ್ದ ರೈತರು, ಆಟೊ ಚಾಲಕರು, ಕೂಲಿ ಕಾರ್ಮಿಕರು ಸೇರಿದಂತೆ ಬಡ ಮಧ್ಯಮ ವರ್ಗದ ಜನರು ತೀವ್ರ ಪರದಾಡುತ್ತಿದ್ದರು.</p>.<p>ಈ ಬಗ್ಗೆ ಪ್ರಜಾವಾಣಿಯಲ್ಲಿ ‘ಇಂದಿರಾ ಕ್ಯಾಂಟೀನ್ ಬಂದ್: ಬಡವರ ಅನ್ನಕ್ಕೂ ಕುತ್ತು’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಟೆಂಡರ್ ಕರೆದು, ಯಾದಗಿರಿಯ ಮಹಿಳಾ ಮಂಡಳಿಯೊಂದಕ್ಕೆ ಗುತ್ತಿಗೆ ನೀಡಿ, ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಕ್ರಮ ಕೈಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ನಗರದ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಪುನರಾರಂಭಗೊಂಡಿದೆ. </p>.<p>2017ರಲ್ಲಿ ನಗರದ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿತ್ತು. ನವಪ್ರಯಾಸ ನವದೆಹಲಿ ಸಂಸ್ಥೆಯವರು 2019ರಿಂದ ಗುತ್ತಿಗೆ ಆಧಾರದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಗುತ್ತಿಗೆದಾರರು 6 ತಿಂಗಳಿಂದ ಬಿಲ್ ಸಲ್ಲಿಸದ ಕಾರಣ ಅನುದಾನ ಬಿಡುಗಡೆಯಾಗದೇ ಕ್ಯಾಂಟೀನ್ ಬಂದ್ ಆಗಿತ್ತು. </p>.<p>ಇಂದಿರಾ ಕ್ಯಾಂಟೀನ್ ಬಂದ್ ಆಗಿದ್ದರಿಂದ, ಹಾವೇರಿ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಗಳು, ಸಂತೆ ಮತ್ತು ತರಕಾರಿ ಮಾರುಕಟ್ಟೆಗೆ ಬರುತ್ತಿದ್ದ ರೈತರು, ಆಟೊ ಚಾಲಕರು, ಕೂಲಿ ಕಾರ್ಮಿಕರು ಸೇರಿದಂತೆ ಬಡ ಮಧ್ಯಮ ವರ್ಗದ ಜನರು ತೀವ್ರ ಪರದಾಡುತ್ತಿದ್ದರು.</p>.<p>ಈ ಬಗ್ಗೆ ಪ್ರಜಾವಾಣಿಯಲ್ಲಿ ‘ಇಂದಿರಾ ಕ್ಯಾಂಟೀನ್ ಬಂದ್: ಬಡವರ ಅನ್ನಕ್ಕೂ ಕುತ್ತು’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಟೆಂಡರ್ ಕರೆದು, ಯಾದಗಿರಿಯ ಮಹಿಳಾ ಮಂಡಳಿಯೊಂದಕ್ಕೆ ಗುತ್ತಿಗೆ ನೀಡಿ, ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಕ್ರಮ ಕೈಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>