<p>ರಾಣೆಬೆನ್ನೂರು: ಆರೇಮಲ್ಲಾಪುರ ಗ್ರಾಮದ ಪಿಡಿಒ ಅವರನ್ನು ಕೂಡಲೇ ವಜಾಗೊಳಿಸಬೇಕು. ಇಲ್ಲದಿದ್ದರೆ ಜು.21ರಂದು ಶರಣಬಸವೇಶ್ವರ ಮಠದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಾಲ್ಲೂಕಿನ ಆರೇಮಲ್ಲಾಪುರ ಗ್ರಾಮದ ಗ್ರಾ.ಪಂ. ಸದಸ್ಯ ಹಾಗೂ ಶರಣಬಸವೇಶ್ವರ ಮಠದ ಪೀಠಾಧಿಪತಿ ಪ್ರಣವಾನಂದರಾಮ ಸ್ವಾಮೀಜಿ ಎಚ್ಚರಿಕೆ ನೀಡಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಡಿಒ ಡಿ.ಬಿ.ಹರಿಜನ ಅವರು 2015ರಿಂದ ಆರೇಮಲ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ಅನೇಕ ಹಗರಣಗಳು ನಡೆದಿವೆ. ಈ ಬಗ್ಗೆ ಲಿಖಿತ ದಾಖಲೆಗಳೊಂದಿಗೆ ಸಂಬಂಧಪಟ್ಟ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳಿಗೆ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಹಣ ದುರುಪಯೋಗವಾಗಿದೆ. ಬಡ ಸಾಮಾನ್ಯರಿಗೆ ತಲುಪಬೇಕಾದಂತಹ ಯೋಜನೆಗಳು ಸರಿಯಾಗಿ ತಲುಪಿಲ್ಲ. ಜಾನುವಾರು ಮತ್ತು ಕುರಿಗಳ ಕೊಟ್ಟಿಗೆ ಕಟ್ಟಡಕ್ಕೂ ಸಹ ಫಲಾನುಭವಿಗಳಿಂದ ಹಣ ವಸೂಲಿ ಮಾಡಿದ್ದಾರೆ. ಉದ್ಯೋಗ ಖಾತ್ರಿಯಲ್ಲಿ ಸಾಕಷ್ಟು ಅವ್ಯವಹಾರವಾಗಿದೆ. ಲೋಕಾಯುಕ್ತಕ್ಕೂ ಕೂಡ ದೂರು ದಾಖಲಿಸಿದ್ದೇನೆ ಎಂದು ದೂರಿದರು.</p>.<p>ಇಂತಹ ಅಧಿಕಾರಿಗಳಿದ್ದರೆ ಗ್ರಾಮವು ಅಬಿವೃದ್ಧಿಯಾಗಲು ಸಾಧ್ಯವಿಲ್ಲ ಕೂಡಲೇ ಇವರನ್ನು ಜು. 20ರೊಳಗೆ ವರ್ಗಾವಣೆ ಮಾಡಿ ವಜಾಗೊಳಿಸಬೇಕು. ಇಲ್ಲವಾದಲ್ಲಿ ಜು.21 ರಂದು ಆಮರಣಾಂತರ ಉಪವಾಸ ಸತ್ಯಾಗ್ರಹವನ್ನು ಗ್ರಾಮದ ಕೈಗೊಳ್ಳುವುದಾಗಿ ಶ್ರೀಗಳು ತಿಳಿಸಿದರು.</p>.<p>ಯಲ್ಲಪ್ಪ ಸೂರ್ವೆ, ಶಿವಣ್ಣ ಸಣ್ಣಬೊಮ್ಮಾಜಿ, ಮಂಜುನಾಥ ವಡ್ಡರ, ದೊಡ್ಡವೀರಪ್ಪ ಚಿನಗುಡಿ, ನಾಗರಾಜ ನಾಗರಜ್ಜಿ, ಶಶಿಧರ ಮಠದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಆರೇಮಲ್ಲಾಪುರ ಗ್ರಾಮದ ಪಿಡಿಒ ಅವರನ್ನು ಕೂಡಲೇ ವಜಾಗೊಳಿಸಬೇಕು. ಇಲ್ಲದಿದ್ದರೆ ಜು.21ರಂದು ಶರಣಬಸವೇಶ್ವರ ಮಠದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಾಲ್ಲೂಕಿನ ಆರೇಮಲ್ಲಾಪುರ ಗ್ರಾಮದ ಗ್ರಾ.ಪಂ. ಸದಸ್ಯ ಹಾಗೂ ಶರಣಬಸವೇಶ್ವರ ಮಠದ ಪೀಠಾಧಿಪತಿ ಪ್ರಣವಾನಂದರಾಮ ಸ್ವಾಮೀಜಿ ಎಚ್ಚರಿಕೆ ನೀಡಿದರು.</p>.<p>ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಡಿಒ ಡಿ.ಬಿ.ಹರಿಜನ ಅವರು 2015ರಿಂದ ಆರೇಮಲ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ಅನೇಕ ಹಗರಣಗಳು ನಡೆದಿವೆ. ಈ ಬಗ್ಗೆ ಲಿಖಿತ ದಾಖಲೆಗಳೊಂದಿಗೆ ಸಂಬಂಧಪಟ್ಟ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಅಧಿಕಾರಿಗಳಿಗೆ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಹಣ ದುರುಪಯೋಗವಾಗಿದೆ. ಬಡ ಸಾಮಾನ್ಯರಿಗೆ ತಲುಪಬೇಕಾದಂತಹ ಯೋಜನೆಗಳು ಸರಿಯಾಗಿ ತಲುಪಿಲ್ಲ. ಜಾನುವಾರು ಮತ್ತು ಕುರಿಗಳ ಕೊಟ್ಟಿಗೆ ಕಟ್ಟಡಕ್ಕೂ ಸಹ ಫಲಾನುಭವಿಗಳಿಂದ ಹಣ ವಸೂಲಿ ಮಾಡಿದ್ದಾರೆ. ಉದ್ಯೋಗ ಖಾತ್ರಿಯಲ್ಲಿ ಸಾಕಷ್ಟು ಅವ್ಯವಹಾರವಾಗಿದೆ. ಲೋಕಾಯುಕ್ತಕ್ಕೂ ಕೂಡ ದೂರು ದಾಖಲಿಸಿದ್ದೇನೆ ಎಂದು ದೂರಿದರು.</p>.<p>ಇಂತಹ ಅಧಿಕಾರಿಗಳಿದ್ದರೆ ಗ್ರಾಮವು ಅಬಿವೃದ್ಧಿಯಾಗಲು ಸಾಧ್ಯವಿಲ್ಲ ಕೂಡಲೇ ಇವರನ್ನು ಜು. 20ರೊಳಗೆ ವರ್ಗಾವಣೆ ಮಾಡಿ ವಜಾಗೊಳಿಸಬೇಕು. ಇಲ್ಲವಾದಲ್ಲಿ ಜು.21 ರಂದು ಆಮರಣಾಂತರ ಉಪವಾಸ ಸತ್ಯಾಗ್ರಹವನ್ನು ಗ್ರಾಮದ ಕೈಗೊಳ್ಳುವುದಾಗಿ ಶ್ರೀಗಳು ತಿಳಿಸಿದರು.</p>.<p>ಯಲ್ಲಪ್ಪ ಸೂರ್ವೆ, ಶಿವಣ್ಣ ಸಣ್ಣಬೊಮ್ಮಾಜಿ, ಮಂಜುನಾಥ ವಡ್ಡರ, ದೊಡ್ಡವೀರಪ್ಪ ಚಿನಗುಡಿ, ನಾಗರಾಜ ನಾಗರಜ್ಜಿ, ಶಶಿಧರ ಮಠದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>