<p><strong>ಹಾವೇರಿ:</strong> ಮಾರ್ಚ್ 4 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ನಕಲು ಮುಕ್ತ ಹಾಗೂ ಪಾರದರ್ಶಕ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಬಿಗಿಭದ್ರತೆ ಕೈಗೊಂಡಿದೆ. ಎಲ್ಲ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.</p>.<p>ಮಾರ್ಚ್ 4ರಿಂದ ಮಾರ್ಚ್ 23ರ ಸೋಮವಾರದವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯಂತ 23 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ತಾಲ್ಲೂಕುವಾರು ವಿವರದಂತೆ ಹಾವೇರಿ-4, ಸವಣೂರು-1, ಶಿಗ್ಗಾವಿ-2, ಹಾನಗಲ್-3, ಹಿರೇಕೆರೂರು-4, ಬ್ಯಾಡಗಿ-2, ರಾಣೇಬೆನ್ನೂರು-7 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದರು.</p>.<p>ಈ ವರ್ಷ ಜಿಲ್ಲೆಯಿಂದ 14,588 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ನೊಂದಾಯಿಸಿಕೊಂಡಿದ್ದಾರೆ. ಕಲಾ ವಿಭಾಗದಿಂದ 6,941, ವಾಣಿಜ್ಯ ವಿಭಾಗದಿಂದ 4,868 ಹಾಗೂ ವಿಜ್ಞಾನ ವಿಭಾಗದಿಂದ 2,779 ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟಾರೆ 14,588 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 12,261 ರೆಗ್ಯುಲರ್ ವಿದ್ಯಾರ್ಥಿಗಳು , 1,707 ಪುನರಾವರ್ತಿತ ವಿದ್ಯಾರ್ಥಿಗಳು, 620 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಪಾರದರ್ಶಕ ಪರೀಕ್ಷೆಗಾಗಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯಗೊಳಿಸಲಾಗಿದೆ. ಜಿಲ್ಲಾ ಜಾಗೃತ ದಳ ತಂಡ ರಚಿಸಲಾಗಿದೆ. ಪ್ರತಿ ತಾಲ್ಲೂಕಿಗೊಂದರಂತೆ ಎಂಟು ಸಿಟ್ಟಿಂಗ್ ಸ್ಕ್ವಾಡ್ಗಳನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ರೊಟೇಶನ್ ಮಾದರಿಯಲ್ಲಿ ತಲಾ ಇಬ್ಬರು ಸಿಟ್ಟಿಂಗ್ ಸ್ಕ್ವಾಡ್ಗಳನ್ನು ಹಾಗೂ ಜಾಗೃತ ದಳದ ಸದಸ್ಯರು ಹಾಜರಿರುವಂತೆ ನಿಯೋಜಿಸಲಾಗಿದೆ. ಖಜಾನೆಯಿಂದ ಪ್ರತಿದಿನದ ಪರೀಕ್ಷೆಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸೂಕ್ತ ಬಂದೋ ಬಸ್ತ್ನೊಂದಿಗೆ ರವಾನಿಸಲಾಗುವುದು. ಈ ಉದ್ದೇಶಕ್ಕಾಗಿ ತ್ರಿ-ಸದಸ್ಯ ಸಮಿತಿ ರಚಿಸಲಾಗಿದೆ. ಪ್ರಶ್ನೆಪತ್ರಿಕೆ ರವಾನಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಿ ಪೊಲೀಸ್ ಪಹರೆಯೊಂದಿಗೆ ಪರೀಕ್ಷಾ ಕೇಂದ್ರ ತಲುಪುವ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಪೀಠೋಪಕರಣಗಳ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಆಕಸ್ಮಿಕವಾಗಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದರೆ ತಕ್ಷಣವೇ ಸೂಕ್ತಚಿಕಿತ್ಸೆ ನೀಡಲು ಆರೋಗ್ಯ ಸಹಾಯಕರ ಸೇವೆ ಪರೀಕ್ಷಾ ಕೇಂದ್ರದಲ್ಲಿ ಲಭ್ಯವಿರುವಂತೆ ಕ್ರಮವಹಿಸಲಾಗಿದೆ ಎಂದು ಹೇಳಿದರು.</p>.<p>ಮೊಬೈಲ್-ಎಲೆಕ್ಟ್ರಾನಿಕ್ ಡಿವೈಸ್ ನಿಷೇಧ: ಪರೀಕ್ಷೆ ನಡೆಯುವಾಗ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ. ಇ-ಕ್ಯಾಮೆರಾ, ಲ್ಯಾಪ್ಟಾಪ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ನಿಷೇಧಿತ ಪ್ರದೇಶದಲ್ಲಿ ಮುಚ್ಚುವಂತೆ ಸೂಚಿಸಲಾಗಿದೆ ಎಂದರು.</p>.<p>ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಭಯವಿಲ್ಲದೇ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಬಹುದು. ಜಿಲ್ಲಾಡಳಿತ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳು ನಡೆಯುವಂತೆ ಕಟ್ಟೆಚ್ಚರವಹಿಸಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ನಿರಂಜನ ಜೆ.ಸಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಮಾರ್ಚ್ 4 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲಾಡಳಿತ ಸನ್ನದ್ಧವಾಗಿದೆ. ನಕಲು ಮುಕ್ತ ಹಾಗೂ ಪಾರದರ್ಶಕ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಬಿಗಿಭದ್ರತೆ ಕೈಗೊಂಡಿದೆ. ಎಲ್ಲ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.</p>.<p>ಮಾರ್ಚ್ 4ರಿಂದ ಮಾರ್ಚ್ 23ರ ಸೋಮವಾರದವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯಂತ 23 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ತಾಲ್ಲೂಕುವಾರು ವಿವರದಂತೆ ಹಾವೇರಿ-4, ಸವಣೂರು-1, ಶಿಗ್ಗಾವಿ-2, ಹಾನಗಲ್-3, ಹಿರೇಕೆರೂರು-4, ಬ್ಯಾಡಗಿ-2, ರಾಣೇಬೆನ್ನೂರು-7 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದರು.</p>.<p>ಈ ವರ್ಷ ಜಿಲ್ಲೆಯಿಂದ 14,588 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ನೊಂದಾಯಿಸಿಕೊಂಡಿದ್ದಾರೆ. ಕಲಾ ವಿಭಾಗದಿಂದ 6,941, ವಾಣಿಜ್ಯ ವಿಭಾಗದಿಂದ 4,868 ಹಾಗೂ ವಿಜ್ಞಾನ ವಿಭಾಗದಿಂದ 2,779 ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟಾರೆ 14,588 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 12,261 ರೆಗ್ಯುಲರ್ ವಿದ್ಯಾರ್ಥಿಗಳು , 1,707 ಪುನರಾವರ್ತಿತ ವಿದ್ಯಾರ್ಥಿಗಳು, 620 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಪಾರದರ್ಶಕ ಪರೀಕ್ಷೆಗಾಗಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಡ್ಡಾಯಗೊಳಿಸಲಾಗಿದೆ. ಜಿಲ್ಲಾ ಜಾಗೃತ ದಳ ತಂಡ ರಚಿಸಲಾಗಿದೆ. ಪ್ರತಿ ತಾಲ್ಲೂಕಿಗೊಂದರಂತೆ ಎಂಟು ಸಿಟ್ಟಿಂಗ್ ಸ್ಕ್ವಾಡ್ಗಳನ್ನು ರಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ರೊಟೇಶನ್ ಮಾದರಿಯಲ್ಲಿ ತಲಾ ಇಬ್ಬರು ಸಿಟ್ಟಿಂಗ್ ಸ್ಕ್ವಾಡ್ಗಳನ್ನು ಹಾಗೂ ಜಾಗೃತ ದಳದ ಸದಸ್ಯರು ಹಾಜರಿರುವಂತೆ ನಿಯೋಜಿಸಲಾಗಿದೆ. ಖಜಾನೆಯಿಂದ ಪ್ರತಿದಿನದ ಪರೀಕ್ಷೆಗಳಿಗೆ ಪ್ರಶ್ನೆಪತ್ರಿಕೆಗಳನ್ನು ಸೂಕ್ತ ಬಂದೋ ಬಸ್ತ್ನೊಂದಿಗೆ ರವಾನಿಸಲಾಗುವುದು. ಈ ಉದ್ದೇಶಕ್ಕಾಗಿ ತ್ರಿ-ಸದಸ್ಯ ಸಮಿತಿ ರಚಿಸಲಾಗಿದೆ. ಪ್ರಶ್ನೆಪತ್ರಿಕೆ ರವಾನಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಿ ಪೊಲೀಸ್ ಪಹರೆಯೊಂದಿಗೆ ಪರೀಕ್ಷಾ ಕೇಂದ್ರ ತಲುಪುವ ವ್ಯವಸ್ಥೆ ಮಾಡಲಾಗಿದೆ ಎಂದರು.</p>.<p>ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಪೀಠೋಪಕರಣಗಳ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಆಕಸ್ಮಿಕವಾಗಿ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದರೆ ತಕ್ಷಣವೇ ಸೂಕ್ತಚಿಕಿತ್ಸೆ ನೀಡಲು ಆರೋಗ್ಯ ಸಹಾಯಕರ ಸೇವೆ ಪರೀಕ್ಷಾ ಕೇಂದ್ರದಲ್ಲಿ ಲಭ್ಯವಿರುವಂತೆ ಕ್ರಮವಹಿಸಲಾಗಿದೆ ಎಂದು ಹೇಳಿದರು.</p>.<p>ಮೊಬೈಲ್-ಎಲೆಕ್ಟ್ರಾನಿಕ್ ಡಿವೈಸ್ ನಿಷೇಧ: ಪರೀಕ್ಷೆ ನಡೆಯುವಾಗ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ. ಇ-ಕ್ಯಾಮೆರಾ, ಲ್ಯಾಪ್ಟಾಪ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ನಿಷೇಧಿತ ಪ್ರದೇಶದಲ್ಲಿ ಮುಚ್ಚುವಂತೆ ಸೂಚಿಸಲಾಗಿದೆ ಎಂದರು.</p>.<p>ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಯಾವುದೇ ರೀತಿಯ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಭಯವಿಲ್ಲದೇ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಬರೆಯಬಹುದು. ಜಿಲ್ಲಾಡಳಿತ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳು ನಡೆಯುವಂತೆ ಕಟ್ಟೆಚ್ಚರವಹಿಸಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ನಿರಂಜನ ಜೆ.ಸಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>