ರಾಣೆಬೆನ್ನೂರು: ಎಲ್ಲರೂ 90 ಅಂಕಗಳಿಗೆ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡುತ್ತಾರೆ. ನಮ್ಮಲ್ಲಿ ಬಡವರು, ಮಧ್ಯಮ ವರ್ಗದವವರಿಗೆ ಮತ್ತು ಕಡಿಮೆ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಅತ್ಯಂತ ಕಡಿಮೆ ದರದಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡುವುದು ಸಂಸ್ಥೆಯ ಸದುದ್ದೇಶವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಸವರಾಜ ಎನ್. ಪಾಟೀಲ ಹೇಳಿದರು.