ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಎಲ್ಲ ತಾಲ್ಲೂಕು ಕೇಂದ್ರಗಳಲ್ಲು ಸಾಹಿತ್ಯ ಭವನ ನಿರ್ಮಾಣ ಮಾಡುವ ಉದ್ದೇಶ ಹೊಂದಿದ್ದೇನೆ. ಕವಿಗಳು ಮತ್ತು ಸಾಹಿತಿಗಳಿಗೆ ‘ಕಮ್ಮಟ’ ಆಯೋಜಿಸಿ, ನಿರಂತರವಾಗಿ ಸಾಹಿತ್ಯಿಕ ಚಟುವಟಿಕೆ ನಡೆಸಲಾಗುವುದು. ಹೊಸ ಪೀಳಿಗೆ ಮತ್ತು ಹಳೆ ತಲೆಮಾರಿನ ಎಲೆ ಮರೆಯ ಕಾಯಿಯಂತಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕೆಲಸ ಮಾಡುತ್ತೇನೆ ಎಂದರು.