<p class="rtejustify"><strong>ಹಾವೇರಿ: </strong>ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹನುಮಂತರಾಯ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.</p>.<p class="rtejustify">ಬೆಂಗಳೂರು ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಅವರು ಅಧಿಕಾರ ಹಸ್ತಾಂತರಿಸಿ, ಹೂಗುಚ್ಛ ನೀಡಿ ನೂತನ ಎಸ್.ಪಿ. ಅವರನ್ನು ಸ್ವಾಗತಿಸಿದರು.</p>.<p class="rtejustify">‘ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಪೊಲೀಸ್ ಇಲಾಖೆ ತಂಡವಾಗಿ ಕೆಲಸ ಮಾಡಲಿದೆ. ‘ಜನಸ್ನೇಹಿ ಪೊಲೀಸ್ ಸೇವೆ’ಗೆ ಆದ್ಯತೆ ನೀಡಲಾಗುವುದು. ಗ್ರಾಮೀಣ ಮತ್ತು ನಗರದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುವುದು. ಈ ನಿಟ್ಟಿನಲ್ಲಿ ‘ತುರ್ತು ಸ್ಪಂದನ ಸಹಾಯ ವ್ಯವಸ್ಥೆ’ (ಇ.ಆರ್.ಎಸ್.ಎಸ್) ಸೇವೆಯನ್ನು ಬಲಪಡಿಸಲಾಗುವುದು’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹನುಮಂತರಾಯ ಹೇಳಿದರು.</p>.<p class="rtejustify">‘ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ತಂತ್ರಜ್ಞಾನ, ತಂತ್ರಾಂಶಗಳ ಮೂಲಕ ತನಿಖಾ ಕೆಲಸ ಸೇರಿದಂತೆ ಪೊಲೀಸ್ ಸೇವೆಯನ್ನು ಉನ್ನತೀಕರಿಸಲಾಗುವುದು. ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.</p>.<p class="rtejustify">ಅಪರಾಧ ಪ್ರಕರಣಗಳು, ಸರಗಳ್ಳತನ ನಿಯಂತ್ರಣ ಕುರಿತಂತೆ ಅಧಿಕಾರಿಗಳ ಸಭೆ ಕರೆದು ಪರಿಶೀಲನೆ ನಡೆಸಲಾಗುವುದು. ಸ್ಥಳೀಯ ಆಡಳಿತದ ಸಹಕಾರದೊಂದಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಖಾಸಗಿ ಮನೆ, ಶಾಪಿಂಗ್ ಮಾಲ್, ಅಪಾರ್ಟ್ಮೆಂಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಮನವೊಲಿಸಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.</p>.<p class="rtejustify">ರಾಷ್ಟ್ರೀಯ ಹೆದ್ದಾರಿಗಳ ಟೋಲ್ಗೇಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಅಪರಾಧ ಚಟುವಟಿಕೆಗಳ ಬಗ್ಗೆ ಹೆಚ್ಚಿನ ನಿಗಾವಹಿಸಲಾಗುವುದು ಎಂದು ತಿಳಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್ ಅವರು ನೂತನ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಭ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಹಾವೇರಿ: </strong>ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹನುಮಂತರಾಯ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.</p>.<p class="rtejustify">ಬೆಂಗಳೂರು ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿರುವ ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಅವರು ಅಧಿಕಾರ ಹಸ್ತಾಂತರಿಸಿ, ಹೂಗುಚ್ಛ ನೀಡಿ ನೂತನ ಎಸ್.ಪಿ. ಅವರನ್ನು ಸ್ವಾಗತಿಸಿದರು.</p>.<p class="rtejustify">‘ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಪೊಲೀಸ್ ಇಲಾಖೆ ತಂಡವಾಗಿ ಕೆಲಸ ಮಾಡಲಿದೆ. ‘ಜನಸ್ನೇಹಿ ಪೊಲೀಸ್ ಸೇವೆ’ಗೆ ಆದ್ಯತೆ ನೀಡಲಾಗುವುದು. ಗ್ರಾಮೀಣ ಮತ್ತು ನಗರದ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲಾಗುವುದು. ಈ ನಿಟ್ಟಿನಲ್ಲಿ ‘ತುರ್ತು ಸ್ಪಂದನ ಸಹಾಯ ವ್ಯವಸ್ಥೆ’ (ಇ.ಆರ್.ಎಸ್.ಎಸ್) ಸೇವೆಯನ್ನು ಬಲಪಡಿಸಲಾಗುವುದು’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹನುಮಂತರಾಯ ಹೇಳಿದರು.</p>.<p class="rtejustify">‘ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ತಂತ್ರಜ್ಞಾನ, ತಂತ್ರಾಂಶಗಳ ಮೂಲಕ ತನಿಖಾ ಕೆಲಸ ಸೇರಿದಂತೆ ಪೊಲೀಸ್ ಸೇವೆಯನ್ನು ಉನ್ನತೀಕರಿಸಲಾಗುವುದು. ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.</p>.<p class="rtejustify">ಅಪರಾಧ ಪ್ರಕರಣಗಳು, ಸರಗಳ್ಳತನ ನಿಯಂತ್ರಣ ಕುರಿತಂತೆ ಅಧಿಕಾರಿಗಳ ಸಭೆ ಕರೆದು ಪರಿಶೀಲನೆ ನಡೆಸಲಾಗುವುದು. ಸ್ಥಳೀಯ ಆಡಳಿತದ ಸಹಕಾರದೊಂದಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ಖಾಸಗಿ ಮನೆ, ಶಾಪಿಂಗ್ ಮಾಲ್, ಅಪಾರ್ಟ್ಮೆಂಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಮನವೊಲಿಸಿ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.</p>.<p class="rtejustify">ರಾಷ್ಟ್ರೀಯ ಹೆದ್ದಾರಿಗಳ ಟೋಲ್ಗೇಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ಅಪರಾಧ ಚಟುವಟಿಕೆಗಳ ಬಗ್ಗೆ ಹೆಚ್ಚಿನ ನಿಗಾವಹಿಸಲಾಗುವುದು ಎಂದು ತಿಳಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ್ ಅವರು ನೂತನ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಭ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>