ಶ್ರೀನಿವಾಸ್ ಮಾನೆ ಅವರಂಥ ಯುವ ನಾಯಕನನ್ನು ಕಾಂಗ್ರೆಸ್ ಹಾನಗಲ್ ಕ್ಷೇತ್ರದ ಜನರ ಮಡಿಲಿಗೆ ಹಾಕಿದೆ. ಕಳೆದ ಮೂರುವರೆ ವರ್ಷಗಳಲ್ಲಿ ತಮ್ಮ ನಾಯಕತ್ವ ಸಾಬೀತು ಪಡಿಸುವಲ್ಲಿ ಮಾನೆ ಯಶಸ್ವಿಯಾಗಿದ್ದಾರೆ. ಸಮಸ್ಯೆ, ಸವಾಲುಗಳ ಮಧ್ಯೆ ಹೋರಾಡಿ ಕ್ಷೇತ್ರದ ಜನರನ್ನು ರಕ್ಷಿಸಿದ್ದಾರೆ. ಸರ್ಕಾರ ಮಾಡಬೇಕಿದ್ದ ಕೆಲಸಗಳನ್ನು ಮಾಡಿ ಸೈ ಎನಿಸಿಕೊಂಡಿದ್ದು, ಕ್ಷೇತ್ರದ ತುಂಬೆಲ್ಲ ಅವರ ಬಗೆಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದರು.