ಮುಡಿಪು (ದಕ್ಷಿಣ ಕನ್ನಡ): ಕೈರಂಗಳ ಗ್ರಾಮದ ಪುಣ್ಯಕೋಟಿನಗರದ ಅಮೃತಧಾರಾ ಗೋಶಾಲೆಯಿಂದ ದನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹಿಸಿ 9 ದಿನಗಳಿಂದ ಗೋಶಾಲೆಯ ಮುಖ್ಯಸ್ಥ ಟಿ.ಜಿ.ರಾಜಾರಾಮ್ ಭಟ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹ ಜಿಲ್ಲಾಡಳಿತ ನೀಡಿದ ಭರವಸೆಯಂತೆ ಸೋಮವಾರ ರಾತ್ರಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ಕೊನೆಗೊಂಡಿತು.