ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ‘ತಾಲ್ಲೂಕಿನಲ್ಲಿ 16 ಗ್ರಾಮ ಲೆಕ್ಕಾಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಒಬ್ಬೊಬ್ಬರಿಗೆ ಎರಡು ಸಾಜಾಗಳ ಉಸ್ತುವಾರಿ ನೀಡಲಾಗಿದೆ. ಯಾರೊಬ್ಬರೂ ಕೇಂದ್ರ ಸ್ಥಾನದಲ್ಲಿ ವಾಸವಾಗಿಲ್ಲ. ಬೆಳಗ್ಗೆ 12ಕ್ಕೆ ಬರುವ ಅವರು ಒಂದು ಗ್ರಾಮಕ್ಕೆ ತೆರಳಿ ಮಧ್ಯಾಹ್ನ 3 ಗಂಟೆಗೆ ವಾಪಸ್ಸು ಹೋಗುತ್ತಾರೆ. ಅಧಿಕಾರಿಗಳು ಸಕಾಲಕ್ಕೆ ದೊರೆಯದ ಹಿನ್ನೆಲೆಯಲ್ಲಿ ಎಜೆಂಟರಿಗೆ ಕನಿಷ್ಠ ₹200 ಲಂಚಕೊಟ್ಟು ಕೆಲಸ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಆರೋಪಿಸಿದರು.