<p>ರಾಣೆಬೆನ್ನೂರು: ಕಾರ್ಮಿಕರ ಕಿಟ್ ವಿತರಣೆಯಲ್ಲಿ ಆದ ಅವ್ಯವಹಾರದ ಸಮಗ್ರ ತನಿಖೆಗೆ ತಾಲ್ಲೂಕು ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಘಟಕ ಹಾಗೂ ತಾಲ್ಲೂಕು ಕಾರ್ಮಿಕರ ಒಕ್ಕೂಟಗಳ ಪದಾಧಿಕಾರಿಗಳು ಸೋಮವಾರ ಆಗ್ರಹಿಸಿದರು.</p>.<p>ಕಾರ್ಮಿಕರ ಸಂಘಟನೆಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಶಂಕರ್ ಜಿ.ಎಸ್. ಅವರಿಗೆ ಮನವಿ ಸಲ್ಲಿಸಿದರು.</p>.<p>ಕಾಂಗ್ರೆಸ್ ಯುವ ಮುಖಂಡ ಪ್ರಕಾಶ ಕೋಳಿವಾಡ ಮಾತನಾಡಿ, ಲಾಕ್ಡೌನ್ ಸಂದರ್ಭದಲ್ಲಿ ಉದ್ಯೋಗವಿಲ್ಲದೇ ತೊಂದರೆಗೀಡಾದ ಕಾರ್ಮಿಕರಿಗೆ ವಿತರಣೆ ಮಾಡಲು ರಾಜ್ಯ ಸರ್ಕಾರದಿಂದ 8 ಸಾವಿರ ಕಿಟ್ಗಳು ಬಂದಿದ್ದವು. ನಮ್ಮ ಸಂಘಟನೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ದಿನಸಿ ಕಿಟ್ಗಳನ್ನು ನೀಡದೆ ಸ್ಥಳೀಯ ಕಾರ್ಮಿಕದಲ್ಲದವರಿಗೆ ಮತ್ತು ನೋಂದಾಯಿತ ಕಾರ್ಮಿಕದಲ್ಲದವರಿಗೆ ಕಿಟ್ ವಿತರಿಸಿದ್ದಾರೆ ಎಂದು ಆರೋಪಿಸಿದರು.</p>.<p>ಕಿಟ್ ವಿತರಣೆಯಲ್ಲಿ ಕಾರ್ಮಿಕರಿಗೆ ಸಾಕಷ್ಟು ಅನ್ಯಾಯವಾಗಿದೆ. ನಿಜವಾದ ಕಾರ್ಮಿಕರಿಗೆ ಕಿಟ್ಗಳು ತಲುಪಿಲ್ಲ. ಇದರಲ್ಲಿ ಶಾಸಕರಿಗೆ ಬೇಕಾದವರಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಗಿದೆ ಎಂದು ದೂರಿದರು.</p>.<p>ಕಿಟ್ ವಿತರಣೆಯಲ್ಲಿ ಆದ ಅವ್ಯವಹಾರಕ್ಕೆ ಕಾರಣವಾದವರ ವಿರುದ್ಧ ಸಮಗ್ರ ತನಿಖೆ ನಡೆಸಿ, ಕಾನೂನು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>ರವೀಂದ್ರಗೌಡ ಪಾಟೀಲ, ನಿಂಗರಾಜ ಕೋಡಿಹಳ್ಳಿ, ಪುಟ್ಟಪ್ಪ ಮರಿಯಮ್ಮನವರ, ಇಕ್ಬಾಲ್ಸಾಬ್ ರಾಣೆಬೆನ್ನೂರು, ಏಕಾಂತ ಮುದಿಗೌಡ್ರ, ಬಸವರಾಜಪ್ಪ ಸವಣೂರ, ಹನುಮಂತಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಕಾರ್ಮಿಕರ ಕಿಟ್ ವಿತರಣೆಯಲ್ಲಿ ಆದ ಅವ್ಯವಹಾರದ ಸಮಗ್ರ ತನಿಖೆಗೆ ತಾಲ್ಲೂಕು ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಘಟಕ ಹಾಗೂ ತಾಲ್ಲೂಕು ಕಾರ್ಮಿಕರ ಒಕ್ಕೂಟಗಳ ಪದಾಧಿಕಾರಿಗಳು ಸೋಮವಾರ ಆಗ್ರಹಿಸಿದರು.</p>.<p>ಕಾರ್ಮಿಕರ ಸಂಘಟನೆಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಶಂಕರ್ ಜಿ.ಎಸ್. ಅವರಿಗೆ ಮನವಿ ಸಲ್ಲಿಸಿದರು.</p>.<p>ಕಾಂಗ್ರೆಸ್ ಯುವ ಮುಖಂಡ ಪ್ರಕಾಶ ಕೋಳಿವಾಡ ಮಾತನಾಡಿ, ಲಾಕ್ಡೌನ್ ಸಂದರ್ಭದಲ್ಲಿ ಉದ್ಯೋಗವಿಲ್ಲದೇ ತೊಂದರೆಗೀಡಾದ ಕಾರ್ಮಿಕರಿಗೆ ವಿತರಣೆ ಮಾಡಲು ರಾಜ್ಯ ಸರ್ಕಾರದಿಂದ 8 ಸಾವಿರ ಕಿಟ್ಗಳು ಬಂದಿದ್ದವು. ನಮ್ಮ ಸಂಘಟನೆಯಲ್ಲಿ ನೋಂದಾಯಿತ ಕಾರ್ಮಿಕರಿಗೆ ದಿನಸಿ ಕಿಟ್ಗಳನ್ನು ನೀಡದೆ ಸ್ಥಳೀಯ ಕಾರ್ಮಿಕದಲ್ಲದವರಿಗೆ ಮತ್ತು ನೋಂದಾಯಿತ ಕಾರ್ಮಿಕದಲ್ಲದವರಿಗೆ ಕಿಟ್ ವಿತರಿಸಿದ್ದಾರೆ ಎಂದು ಆರೋಪಿಸಿದರು.</p>.<p>ಕಿಟ್ ವಿತರಣೆಯಲ್ಲಿ ಕಾರ್ಮಿಕರಿಗೆ ಸಾಕಷ್ಟು ಅನ್ಯಾಯವಾಗಿದೆ. ನಿಜವಾದ ಕಾರ್ಮಿಕರಿಗೆ ಕಿಟ್ಗಳು ತಲುಪಿಲ್ಲ. ಇದರಲ್ಲಿ ಶಾಸಕರಿಗೆ ಬೇಕಾದವರಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಗಿದೆ ಎಂದು ದೂರಿದರು.</p>.<p>ಕಿಟ್ ವಿತರಣೆಯಲ್ಲಿ ಆದ ಅವ್ಯವಹಾರಕ್ಕೆ ಕಾರಣವಾದವರ ವಿರುದ್ಧ ಸಮಗ್ರ ತನಿಖೆ ನಡೆಸಿ, ಕಾನೂನು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.</p>.<p>ರವೀಂದ್ರಗೌಡ ಪಾಟೀಲ, ನಿಂಗರಾಜ ಕೋಡಿಹಳ್ಳಿ, ಪುಟ್ಟಪ್ಪ ಮರಿಯಮ್ಮನವರ, ಇಕ್ಬಾಲ್ಸಾಬ್ ರಾಣೆಬೆನ್ನೂರು, ಏಕಾಂತ ಮುದಿಗೌಡ್ರ, ಬಸವರಾಜಪ್ಪ ಸವಣೂರ, ಹನುಮಂತಗೌಡ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>