ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಿಂಗಾಯತ ಪ್ರತ್ಯೇಕ ಧರ್ಮ ಮಾಡಬೇಕು ಎಂದು ಹಲವು ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಹೀಗಾಗಿ ಆಯೋಗವು ಸಮಿತಿ ರಚಿಸಿತ್ತು. ಸಂಘಟನೆಗಳು ನಿರಂತರ ಒತ್ತಡ ಹೇರುತ್ತಿದ್ದುದರಿಂದ ಆದಷ್ಟು ಶೀಘ್ರವೇ ವರದಿ ಕೊಡಬೇಕು ಎಂದು ಹೇಳಿದ್ದೇವೆಯೇ ಹೊರತು ಇನ್ನಾವ ಒತ್ತಡವನ್ನೂ ಹೇರಿರಲಿಲ್ಲ’ ಎಂದು ಸ್ಪಷ್ಟಪಡಿಸಿದರು.