ದ್ಯಾಮವ್ವ ಓಣಿ, ಹಳೇ ಅಂಚೆ ಕಚೇರಿ ರಸ್ತೆ, ಕಮಲ ಕಲ್ಯಾಣ ಮಂಟಪ ರಸ್ತೆ, ಜೈನರ ಓಣಿ, ಬಸ್ತಿ ಓಣಿ, ಗೌಳಿಗಲ್ಲಿ, ಯಾಲಕ್ಕಿ ಓಣಿ, ಪುರದ ಓಣಿ, ಮೇಲಿನ ಪೇಟೆ, ಎಂ.ಜಿ.ರಸ್ತೆ, ಬದಾಮಿ ನಾಯ್ಕರ ಅಂಗಡಿ, ಹಳೇ ಚಾವಡಿ ಸೇರಿದಂತೆ ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿವೆ. ಈ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ಎರಡು ತಿಂಗಳ ಹಿಂದೆ ದುರಸ್ತಿ ಮಾಡುವಂತೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.