ಹಾವೇರಿ: ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ತಾನ ರಾಜ್ಯಗಳಲ್ಲಿ ಇರುವಂತೆ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿ ವಯೋಮಿತಿಯನ್ನು ಕರ್ನಾಟಕದಲ್ಲೂ ಗರಿಷ್ಠ 38 ವರ್ಷಗಳವರೆಗೆ ಹೆಚ್ಚಿಸಬೇಕು ಎಂದು ಕಾನ್ಸ್ಟೆಬಲ್ ಹುದ್ದೆ ಆಕಾಂಕ್ಷಿಗಳು ಆಗ್ರಹಿಸಿದರು.
ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಜಿಲ್ಲಾ ಕೋರ್ ಕಮಿಟಿ ಸಭೆ ಮುಗಿಸಿ ಹುಬ್ಬಳ್ಳಿಯತ್ತ ಹೊರಟ್ಟಿದ್ದ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ಸಿಂಗ್ ಕಾರಿಗೆ ಅಡ್ಡ ಕುಳಿತು ಪ್ರತಿಭಟನೆ ನಡೆಸಿದರು.
ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ಬಿಜೆಪಿ ಶಾಸಕರು ಬಂದು ಸಮಾಧಾನ ಹೇಳಿದರೂ ಕಾರಿನ ಮುಂಭಾಗದಿಂದ ಆಕಾಂಕ್ಷಿಗಳು ಹೇಳಲಿಲ್ಲ. ಕಾರಿನಿಂದ ಇಳಿದು ಬಂದ ಅರುಣ್ಸಿಂಗ್ ಆಕಾಂಕ್ಷಿಗಳ ಸಮಸ್ಯೆಗಳನ್ನು ಆಲಿಸಿದರು.
ಮನವಿ ಸ್ವೀಕರಿಸಿದ ನಂತರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರುವುದಾಗಿ ಭರವಸೆ ನೀಡಿ, ಹುಬ್ಬಳ್ಳಿಯತ್ತ ಅರುಣ್ ಸಿಂಗ್ ತೆರಳಿದರು.