<p><strong>ಗುತ್ತಲ (ಹಾವೇರಿ ಜಿಲ್ಲೆ):</strong> ಪಟ್ಟಣದ ಎ.ರುಕ್ಮಿಣಿ ಅವರು ಪಿಎಸ್ಐ ಹುದ್ದೆ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿದ್ದಾರೆ.</p>.<p>ಅವರು ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಹರಪನಹಳ್ಳಿ ತಾಲ್ಲೂಕಿನ ಹಲವಾಗಲು ಗ್ರಾಮದಲ್ಲಿ ಪೂರ್ಣಗೊಳಿಸಿದ್ದರು. ವಿವಾಹದ ಬಳಿಕ ಪದವಿ ಶಿಕ್ಷಣವನ್ನು ಹಾವೇರಿ ಹುಕ್ಕೇರಿಮಠದ ಮಹಿಳಾ ಕಾಲೇಜಿನಲ್ಲಿ ಪಡೆದರು. ಇಬ್ಬರು ಪುತ್ರಿಯರು ಜನಿಸಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿದರು.</p>.<p>ಅವರು ಡಾ.ಡಿ.ಡಿ.ಮೋಟೆಬೆನ್ನೂರ ಪ್ರೌಢಶಾಲೆಯ ಸಹಶಿಕ್ಷಕ ಜಿ.ಹನುಮಂತಪ್ಪ ಅವರ ಪತ್ನಿ.</p>.<p>‘ಪ್ರಜಾವಾಣಿ’ಯೊಂದಿಗೆ ತಮ್ಮ ಸಂತೋಷ ಹಂಚಿಕೊಂಡ ರುಕ್ಷ್ಮಿಣಿ, ‘ಬೆಂಗಳೂರಿನ ಆದಿಚುಂಚನಗಿರಿ ಮಠದ ವಸತಿ ನಿಲಯದಲ್ಲಿ ಉಳಿದುಕೊಂಡು ಜೆಐಸಿಇ ಇನ್ಸ್ಟಿಟ್ಯೂಟ್ನಲ್ಲಿ ಈ ಪರೀಕ್ಷೆಗಾಗಿ ಒಂದೂವರೆ ವರ್ಷ ತರಬೇತಿ ಪಡೆದೆ. ಮೂರನೇ ರ್ಯಾಂಕ್ ಪಡೆದಿರುವುದು ಖುಷಿ ನೀಡಿದೆ. ನಿರಂತರ ಓದಿನಿಂದ ಈ ಸಾಧನೆ ಸಾಧ್ಯವಾಗಿದೆ. ಈ ಮೊದಲು ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದ್ದೆ. ಈ ಸಮಯದಲ್ಲಿ ಪತಿ ನೀಡಿದ ಸಹಕಾರ ಬಹಳ. ಇಬ್ಬರು ಪುಟ್ಟ ಮಕ್ಕಳನ್ನು ಅವರ ಬಳಿಯೇ ಬಿಟ್ಟು ಹೋಗಿದ್ದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಲ (ಹಾವೇರಿ ಜಿಲ್ಲೆ):</strong> ಪಟ್ಟಣದ ಎ.ರುಕ್ಮಿಣಿ ಅವರು ಪಿಎಸ್ಐ ಹುದ್ದೆ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿದ್ದಾರೆ.</p>.<p>ಅವರು ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಹರಪನಹಳ್ಳಿ ತಾಲ್ಲೂಕಿನ ಹಲವಾಗಲು ಗ್ರಾಮದಲ್ಲಿ ಪೂರ್ಣಗೊಳಿಸಿದ್ದರು. ವಿವಾಹದ ಬಳಿಕ ಪದವಿ ಶಿಕ್ಷಣವನ್ನು ಹಾವೇರಿ ಹುಕ್ಕೇರಿಮಠದ ಮಹಿಳಾ ಕಾಲೇಜಿನಲ್ಲಿ ಪಡೆದರು. ಇಬ್ಬರು ಪುತ್ರಿಯರು ಜನಿಸಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಿದರು.</p>.<p>ಅವರು ಡಾ.ಡಿ.ಡಿ.ಮೋಟೆಬೆನ್ನೂರ ಪ್ರೌಢಶಾಲೆಯ ಸಹಶಿಕ್ಷಕ ಜಿ.ಹನುಮಂತಪ್ಪ ಅವರ ಪತ್ನಿ.</p>.<p>‘ಪ್ರಜಾವಾಣಿ’ಯೊಂದಿಗೆ ತಮ್ಮ ಸಂತೋಷ ಹಂಚಿಕೊಂಡ ರುಕ್ಷ್ಮಿಣಿ, ‘ಬೆಂಗಳೂರಿನ ಆದಿಚುಂಚನಗಿರಿ ಮಠದ ವಸತಿ ನಿಲಯದಲ್ಲಿ ಉಳಿದುಕೊಂಡು ಜೆಐಸಿಇ ಇನ್ಸ್ಟಿಟ್ಯೂಟ್ನಲ್ಲಿ ಈ ಪರೀಕ್ಷೆಗಾಗಿ ಒಂದೂವರೆ ವರ್ಷ ತರಬೇತಿ ಪಡೆದೆ. ಮೂರನೇ ರ್ಯಾಂಕ್ ಪಡೆದಿರುವುದು ಖುಷಿ ನೀಡಿದೆ. ನಿರಂತರ ಓದಿನಿಂದ ಈ ಸಾಧನೆ ಸಾಧ್ಯವಾಗಿದೆ. ಈ ಮೊದಲು ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿದ್ದೆ. ಈ ಸಮಯದಲ್ಲಿ ಪತಿ ನೀಡಿದ ಸಹಕಾರ ಬಹಳ. ಇಬ್ಬರು ಪುಟ್ಟ ಮಕ್ಕಳನ್ನು ಅವರ ಬಳಿಯೇ ಬಿಟ್ಟು ಹೋಗಿದ್ದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>