<p>ಹಾವೇರಿ: ಹಾನಗಲ್ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಬಿಜೆಪಿಯಿಂದ ಶೀಘ್ರದಲ್ಲೇ ‘ವಿಷನ್ ಡಾಕ್ಯುಮೆಂಟ್’ ಬಿಡುಗಡೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹಾನಗಲ್ ಚುನಾವಣಾ ಪ್ರಚಾರ ಸಭೆಗೆ ಹೋಗುವ ಮುನ್ನ ಹಾವೇರಿ ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಅಭಿವೃದ್ಧಿ ಎಂದರೆ ಬಿಜೆಪಿ ಎಂದು ಜನಸಾಮಾನ್ಯರಿಗೆ ಗೊತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ನನ್ನ ಬದ್ಧತೆ ಬಗ್ಗೆಯೂ ಜನರಿಗೆ ಚೆನ್ನಾಗಿ ಗೊತ್ತಿದೆ ಎಂದರು.</p>.<p>ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಗಲಿದೆ. ನಮ್ಮ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಶಾಸಕರು, ಸಚಿವರು ಕೂಡ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.</p>.<p>ಹಾನಗಲ್ ತಾಲ್ಲೂಕು ರಾಜಕಾರಣ ಬಹಳ ವಿಭಿನ್ನವಾದುದು. ಸಿ.ಎಂ.ಉದಾಸಿ ಮತ್ತು ಮನೋಹರ ತಹಶೀಲ್ದಾರ್ ಈ ಇಬ್ಬರೂ ಅಭ್ಯರ್ಥಿಗಳ ಕೇಂದ್ರೀಕೃತ ಚುನಾವಣೆಯಾಗಿತ್ತು. ಎರಡು ದಶಕಗಳ ನಂತರ ಮೊದಲ ಬಾರಿ ಆ ಇಬ್ಬರು ಕಣದಲ್ಲಿ ಇಲ್ಲದೇ ಚುನಾವಣೆ ನಡೆಯುತ್ತಿದೆ ಎಂದರು.</p>.<p>ಬಾಳಂಬೀಡ ಏತ ನೀರಾವರಿ ಯೋಜನೆ ಸೇರಿದಂತೆ ಹಲವು ಯೋಜನೆಗಳು ಬಿಜೆಪಿ ಕಾಲದಲ್ಲೇ ಜಾರಿಯಾಗಿವೆ. ಎಲ್ಲವೂ ಕಡತದಲ್ಲಿ ದಾಖಲಾಗಿದೆ. ಸುಳ್ಳು ಪ್ರಚಾರ ಮಾಡಿದರೆ ಸತ್ಯವಾಗುವುದಿಲ್ಲ. ದಾಖಲೆಯನ್ನು ನೋಡಿದರೆ, ಯಾರ ಕಾಲದಲ್ಲಿ ಟೆಂಡರ್ ಆಯಿತು, ಯಾರ ಕಾಲದಲ್ಲಿ ಅನುದಾನ ಬಿಡುಗಡೆ ಆಯಿತು ಎಂಬುದು ತಿಳಿಯುತ್ತದೆ.</p>.<p>ಸಿ.ಎಂ. ಉದಾಸಿ ಅವರು ತಾವು ಗೆಲ್ಲುವ ಮೂಲಕ ಪಕ್ಷವನ್ನೂ ಕಟ್ಟಿ ಬೆಳೆಸಿದರು. ಜನರ ಜತೆ ನಿಕಟ ಸಂಪರ್ಕ ಹೊಂದಿದ್ದರು. ವೈಯಕ್ತಿಕ ಸ್ಪಂದನೆ ಉತ್ತಮವಾಗಿತ್ತು. ಹಾನಗಲ್ ಅಭಿವೃದ್ಧಿಗೆ ಉದಾಸಿ ಕೊಡುಗೆ ಬಹಳ ದೊಡ್ಡದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ರೈತರಿಗೆ ಬೆಳೆ ವಿಮೆಯನ್ನು ಪರಿಚಯ ಮಾಡಿಕೊಟ್ಟಿದ್ದೇ ಉದಾಸಿಯವರು. ಎರಡು ದಶಕಗಳ ಕಾಲ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ಒದಗಿಸಿದ್ದಾರೆ. ಹಾವೇರಿ ಜಿಲ್ಲೆ ಮಾಡುವಲ್ಲೂ ಉದಾಸಿ ಕೊಡುಗೆ ಅಪಾರ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಡಿಗಲ್ಲು ಹಾಕಿದರು. ತುಂಗಾ ಮೇಲ್ದಂಡೆ ಯೋಜನೆ ಕೂಡ ಉದಾಸಿ ಅವರ ಕೊಡುಗೆ ದೊಡ್ಡದು ಎಂದು ಗುಣಗಾನ ಮಾಡಿದರು.</p>.<p>ಬಿ.ಎಸ್. ಯಡಿಯೂರಪ್ಪನವರು ಯಾರ ಬಲವಂತದಿಂದಲೂ ಚುನಾವಣಾ ಪ್ರಚಾರಕ್ಕೆ ಬರುತ್ತಿಲ್ಲ. ಅವರೇ ಸ್ವಯಂ ಸ್ಫೂರ್ತಿಯಿಂದ ಪಕ್ಷದ ಗೆಲುವಿಗೆ ಪ್ರಚಾರ ನಡೆಸುತ್ತಾರೆ ಎಂದರು.</p>.<p>ರಾಜ್ಯ ಘಟಕದ ಅಧ್ಯಕ್ಷ ನಳೀನ್ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇಂಧನ ಸಚಿವ ವಿ.ಸುನಿಲ್ಕುಮಾರ್, ಕೃಷಿ ಸಚಿವ ಬಿ.ಸಿ.ಪಾಟೀಲ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಜಗದೀಶ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದ ಶಿವಕುಮಾರ ಉದಾಸಿ, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ, ಸಿದ್ದರಾಜ ಕಲಕೋಟಿ, ಮಹೇಶ ಟೆಂಗಿನಕಾಯಿ, ಶಾಸಕರಾದ ಅರುಣ್ಕುಮಾರ್ ಪೂಜಾರ್, ವಿರೂಪಾಕ್ಷಪ್ಪ ಬಳ್ಳಾರಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಇತರ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಹಾನಗಲ್ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಬಿಜೆಪಿಯಿಂದ ಶೀಘ್ರದಲ್ಲೇ ‘ವಿಷನ್ ಡಾಕ್ಯುಮೆಂಟ್’ ಬಿಡುಗಡೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಹಾನಗಲ್ ಚುನಾವಣಾ ಪ್ರಚಾರ ಸಭೆಗೆ ಹೋಗುವ ಮುನ್ನ ಹಾವೇರಿ ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಅಭಿವೃದ್ಧಿ ಎಂದರೆ ಬಿಜೆಪಿ ಎಂದು ಜನಸಾಮಾನ್ಯರಿಗೆ ಗೊತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ನನ್ನ ಬದ್ಧತೆ ಬಗ್ಗೆಯೂ ಜನರಿಗೆ ಚೆನ್ನಾಗಿ ಗೊತ್ತಿದೆ ಎಂದರು.</p>.<p>ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಗಲಿದೆ. ನಮ್ಮ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಶಾಸಕರು, ಸಚಿವರು ಕೂಡ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.</p>.<p>ಹಾನಗಲ್ ತಾಲ್ಲೂಕು ರಾಜಕಾರಣ ಬಹಳ ವಿಭಿನ್ನವಾದುದು. ಸಿ.ಎಂ.ಉದಾಸಿ ಮತ್ತು ಮನೋಹರ ತಹಶೀಲ್ದಾರ್ ಈ ಇಬ್ಬರೂ ಅಭ್ಯರ್ಥಿಗಳ ಕೇಂದ್ರೀಕೃತ ಚುನಾವಣೆಯಾಗಿತ್ತು. ಎರಡು ದಶಕಗಳ ನಂತರ ಮೊದಲ ಬಾರಿ ಆ ಇಬ್ಬರು ಕಣದಲ್ಲಿ ಇಲ್ಲದೇ ಚುನಾವಣೆ ನಡೆಯುತ್ತಿದೆ ಎಂದರು.</p>.<p>ಬಾಳಂಬೀಡ ಏತ ನೀರಾವರಿ ಯೋಜನೆ ಸೇರಿದಂತೆ ಹಲವು ಯೋಜನೆಗಳು ಬಿಜೆಪಿ ಕಾಲದಲ್ಲೇ ಜಾರಿಯಾಗಿವೆ. ಎಲ್ಲವೂ ಕಡತದಲ್ಲಿ ದಾಖಲಾಗಿದೆ. ಸುಳ್ಳು ಪ್ರಚಾರ ಮಾಡಿದರೆ ಸತ್ಯವಾಗುವುದಿಲ್ಲ. ದಾಖಲೆಯನ್ನು ನೋಡಿದರೆ, ಯಾರ ಕಾಲದಲ್ಲಿ ಟೆಂಡರ್ ಆಯಿತು, ಯಾರ ಕಾಲದಲ್ಲಿ ಅನುದಾನ ಬಿಡುಗಡೆ ಆಯಿತು ಎಂಬುದು ತಿಳಿಯುತ್ತದೆ.</p>.<p>ಸಿ.ಎಂ. ಉದಾಸಿ ಅವರು ತಾವು ಗೆಲ್ಲುವ ಮೂಲಕ ಪಕ್ಷವನ್ನೂ ಕಟ್ಟಿ ಬೆಳೆಸಿದರು. ಜನರ ಜತೆ ನಿಕಟ ಸಂಪರ್ಕ ಹೊಂದಿದ್ದರು. ವೈಯಕ್ತಿಕ ಸ್ಪಂದನೆ ಉತ್ತಮವಾಗಿತ್ತು. ಹಾನಗಲ್ ಅಭಿವೃದ್ಧಿಗೆ ಉದಾಸಿ ಕೊಡುಗೆ ಬಹಳ ದೊಡ್ಡದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ರೈತರಿಗೆ ಬೆಳೆ ವಿಮೆಯನ್ನು ಪರಿಚಯ ಮಾಡಿಕೊಟ್ಟಿದ್ದೇ ಉದಾಸಿಯವರು. ಎರಡು ದಶಕಗಳ ಕಾಲ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನ್ಯಾಯ ಒದಗಿಸಿದ್ದಾರೆ. ಹಾವೇರಿ ಜಿಲ್ಲೆ ಮಾಡುವಲ್ಲೂ ಉದಾಸಿ ಕೊಡುಗೆ ಅಪಾರ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಡಿಗಲ್ಲು ಹಾಕಿದರು. ತುಂಗಾ ಮೇಲ್ದಂಡೆ ಯೋಜನೆ ಕೂಡ ಉದಾಸಿ ಅವರ ಕೊಡುಗೆ ದೊಡ್ಡದು ಎಂದು ಗುಣಗಾನ ಮಾಡಿದರು.</p>.<p>ಬಿ.ಎಸ್. ಯಡಿಯೂರಪ್ಪನವರು ಯಾರ ಬಲವಂತದಿಂದಲೂ ಚುನಾವಣಾ ಪ್ರಚಾರಕ್ಕೆ ಬರುತ್ತಿಲ್ಲ. ಅವರೇ ಸ್ವಯಂ ಸ್ಫೂರ್ತಿಯಿಂದ ಪಕ್ಷದ ಗೆಲುವಿಗೆ ಪ್ರಚಾರ ನಡೆಸುತ್ತಾರೆ ಎಂದರು.</p>.<p>ರಾಜ್ಯ ಘಟಕದ ಅಧ್ಯಕ್ಷ ನಳೀನ್ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇಂಧನ ಸಚಿವ ವಿ.ಸುನಿಲ್ಕುಮಾರ್, ಕೃಷಿ ಸಚಿವ ಬಿ.ಸಿ.ಪಾಟೀಲ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಶಾಸಕ ಜಗದೀಶ ಶೆಟ್ಟರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದ ಶಿವಕುಮಾರ ಉದಾಸಿ, ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ, ಸಿದ್ದರಾಜ ಕಲಕೋಟಿ, ಮಹೇಶ ಟೆಂಗಿನಕಾಯಿ, ಶಾಸಕರಾದ ಅರುಣ್ಕುಮಾರ್ ಪೂಜಾರ್, ವಿರೂಪಾಕ್ಷಪ್ಪ ಬಳ್ಳಾರಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಇತರ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>