<p><strong>ಹಾವೇರಿ:</strong> ‘ರಾಜ್ಯದಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ಅತ್ಯಂತ ನಿಕೃಷ್ಟವಾಗಿ ಬದುಕುತ್ತಿದ್ದಾರೆ. ವಸತಿ ಸೇರಿದಂತೆ ಈ ಜನಾಂಗಕ್ಕೆ ಕನಿಷ್ಠ ಮೂಲಸೌಕರ್ಯ ಒದಗಿಸುವುದು ಅಗತ್ಯವಾಗಿದೆ. ಇವರ ಜೀವನ ಸ್ಥಿತಿಗತಿ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ರಾಜ್ಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರಶೆಟ್ಟಿ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಈಗಾಗಲೇ ರಾಜ್ಯದ 19 ಜಿಲ್ಲೆಗಳಿಗೆ ಭೇಟಿ ನೀಡಿ ಜನಾಂಗದ ಕುಂದು ಕೊರತೆಗಳನ್ನು ಆಲಿಸಿದ್ದೇನೆ. ಪ್ರವರ್ಗ 1ಕ್ಕೆ ಸೇರುವ ಈ ಜನಾಂಗದಲ್ಲಿ 46 ಜಾತಿಗಳು ಬರುತ್ತವೆ. ರಾಜ್ಯದಲ್ಲಿ 70 ಲಕ್ಷ ಜನಸಂಖ್ಯೆಯಿದ್ದು, ಈ ಸಮುದಾಯಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ’ ಎಂದರು.</p>.<p class="Subhead"><strong>ಸಿಕ್ಕಿದ್ದು ಕೇವಲ ₹5 ಕೋಟಿ:</strong>ಅಲೆಮಾರಿ ಜನಾಂಗದವರಿಗೆ ಕೌಶಲಾಭಿವೃದ್ಧಿ ಹಾಗೂ ವಿವಿಧ ಯೋಜನೆಯಡಿ ನೆರವು ಒದಗಿಸಲು ಸರ್ಕಾರಕ್ಕೆ ₹250 ಕೋಟಿ ಅನುದಾನ ಕೇಳಲಾಗಿತ್ತು. ಈ ಪೈಕಿ ₹5 ಕೋಟಿ ಮಾತ್ರ ನಿಗಮಕ್ಕೆ ಅನುದಾನ ಸಿಕ್ಕಿದೆ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗುವುದು ಎಂದರು.</p>.<p>ಕನಿಷ್ಠ ಗುಡಿಸಲು, ಜೋಪಡಿಯೂ ಇಲ್ಲದೆ ಅತ್ಯಂತ ನಿಕೃಷ್ಟವಾಗಿ ಬದುಕುತ್ತಿರುವ ಅಲೆಮಾರಿ ಜನಾಂಗದವರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕಳೆದ ವರ್ಷ ಉಳಿದ ₹7 ಕೋಟಿ ಸೇರಿದಂತೆ ಒಟ್ಟು ₹12.5 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಕ್ರಿಯಾಯೋಜನೆ ರೂಪಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಸಹಾಯ ಸಂಘಗಳ ಆರ್ಥಿಕ ನೆರವು, ಅರಿವು ಶೈಕ್ಷಣಿಕ ಸಾಲ ಯೋಜನೆ, ಕೌಶಲ ತರಬೇತಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.</p>.<p class="Subhead"><strong>ಕಲಾ ಉತ್ಸವ:</strong>ಅಲೆಮಾರಿ ಜನಾಂಗದ ವಿಶಿಷ್ಟ ಸಂಸ್ಕೃತಿ ಮತ್ತು ಕಲೆಗಳ ಕುರಿತು ಬೆಂಗಳೂರಿನಲ್ಲಿ ಸಾಂಸ್ಕೃತಿಕ ಕಲಾ ಉತ್ಸವ ನಡೆಸುವ ಉದ್ದೇಶವಿದೆ.ಕೋವಿಡ್ ಸೋಂಕು ಇಳಿಮುಖವಾದ ನಂತರ ಸಮಾವೇಶ ನಡೆಸಲಾಗುವುದು. ಅಲೆಮಾರಿಗಳ ಕುಲಕಸುಬು ಮತ್ತು ಕಲೆಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುತ್ತೇವೆ ಎಂದರು.</p>.<p class="Subhead"><strong>750 ಮಂದಿಗೆ ಹೊಲಿಗೆ ಯಂತ್ರ ವಿತರಣೆ</strong></p>.<p>ಮೊದಲ ಬಾರಿಗೆ ಅಲೆಮಾರಿ ಮತ್ತು ಅರೆಅಲೆಮಾರಿ ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ಕಲ್ಪಿಸುವ ಹಿನ್ನೆಲೆಯಲ್ಲಿ ಕೌಶಲ ತರಬೇತಿ ಕಾರ್ಯಕ್ರಮವನ್ನು ರೂಪಿಸಿದ್ದು, ₹1.25 ಕೋಟಿ ಕಾಯ್ದಿರಿಸಲಾಗಿದೆ. ಟೇಲರಿಂಗ್, ಬ್ಯೂಟಿಷಿಯನ್ ತರಬೇತಿ ನೀಡುವ ಜತೆಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸುತ್ತೇವೆ. ರಾಜ್ಯದ 750 ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದುರಾಜ್ಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ನಿಗಮದ ಅಧ್ಯಕ್ಷ ಕೆ.ರವೀಂದ್ರಶೆಟ್ಟಿ ತಿಳಿಸಿದರು.</p>.<p>ನಿಗಮದ ವ್ಯವಸ್ಥಾಪಕ ಮಹಾದೇವ ಮಳಲಿ, ಗೊಲ್ಲ ಸಮುದಾಯದ ಅಧ್ಯಕ್ಷ ಸಿ.ಎಂ. ತಂಗೋಡರ, ನಾಗರಾಜ, ಅಲೆಮಾರಿ ಸಮಾಜದ ಶೆಟ್ಟಿ ವಿಭೂತಿ, ಹುಲ್ಲಪ್ಪ ಜಾಡರ, ಅಶೋಕ ಬಸ್ತಿ, ಯಾದವ ಜನಾಂಗದ ಅಧ್ಯಕ್ಷ ಚಂದ್ರಶೇಖರ ಗೌಡರ, ಸತೀಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ರಾಜ್ಯದಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ಅತ್ಯಂತ ನಿಕೃಷ್ಟವಾಗಿ ಬದುಕುತ್ತಿದ್ದಾರೆ. ವಸತಿ ಸೇರಿದಂತೆ ಈ ಜನಾಂಗಕ್ಕೆ ಕನಿಷ್ಠ ಮೂಲಸೌಕರ್ಯ ಒದಗಿಸುವುದು ಅಗತ್ಯವಾಗಿದೆ. ಇವರ ಜೀವನ ಸ್ಥಿತಿಗತಿ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ರಾಜ್ಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರಶೆಟ್ಟಿ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಈಗಾಗಲೇ ರಾಜ್ಯದ 19 ಜಿಲ್ಲೆಗಳಿಗೆ ಭೇಟಿ ನೀಡಿ ಜನಾಂಗದ ಕುಂದು ಕೊರತೆಗಳನ್ನು ಆಲಿಸಿದ್ದೇನೆ. ಪ್ರವರ್ಗ 1ಕ್ಕೆ ಸೇರುವ ಈ ಜನಾಂಗದಲ್ಲಿ 46 ಜಾತಿಗಳು ಬರುತ್ತವೆ. ರಾಜ್ಯದಲ್ಲಿ 70 ಲಕ್ಷ ಜನಸಂಖ್ಯೆಯಿದ್ದು, ಈ ಸಮುದಾಯಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ’ ಎಂದರು.</p>.<p class="Subhead"><strong>ಸಿಕ್ಕಿದ್ದು ಕೇವಲ ₹5 ಕೋಟಿ:</strong>ಅಲೆಮಾರಿ ಜನಾಂಗದವರಿಗೆ ಕೌಶಲಾಭಿವೃದ್ಧಿ ಹಾಗೂ ವಿವಿಧ ಯೋಜನೆಯಡಿ ನೆರವು ಒದಗಿಸಲು ಸರ್ಕಾರಕ್ಕೆ ₹250 ಕೋಟಿ ಅನುದಾನ ಕೇಳಲಾಗಿತ್ತು. ಈ ಪೈಕಿ ₹5 ಕೋಟಿ ಮಾತ್ರ ನಿಗಮಕ್ಕೆ ಅನುದಾನ ಸಿಕ್ಕಿದೆ. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗುವುದು ಎಂದರು.</p>.<p>ಕನಿಷ್ಠ ಗುಡಿಸಲು, ಜೋಪಡಿಯೂ ಇಲ್ಲದೆ ಅತ್ಯಂತ ನಿಕೃಷ್ಟವಾಗಿ ಬದುಕುತ್ತಿರುವ ಅಲೆಮಾರಿ ಜನಾಂಗದವರಿಗೆ ವಸತಿ ಸೌಕರ್ಯ ಕಲ್ಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಕಳೆದ ವರ್ಷ ಉಳಿದ ₹7 ಕೋಟಿ ಸೇರಿದಂತೆ ಒಟ್ಟು ₹12.5 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಕ್ರಿಯಾಯೋಜನೆ ರೂಪಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಸಹಾಯ ಸಂಘಗಳ ಆರ್ಥಿಕ ನೆರವು, ಅರಿವು ಶೈಕ್ಷಣಿಕ ಸಾಲ ಯೋಜನೆ, ಕೌಶಲ ತರಬೇತಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.</p>.<p class="Subhead"><strong>ಕಲಾ ಉತ್ಸವ:</strong>ಅಲೆಮಾರಿ ಜನಾಂಗದ ವಿಶಿಷ್ಟ ಸಂಸ್ಕೃತಿ ಮತ್ತು ಕಲೆಗಳ ಕುರಿತು ಬೆಂಗಳೂರಿನಲ್ಲಿ ಸಾಂಸ್ಕೃತಿಕ ಕಲಾ ಉತ್ಸವ ನಡೆಸುವ ಉದ್ದೇಶವಿದೆ.ಕೋವಿಡ್ ಸೋಂಕು ಇಳಿಮುಖವಾದ ನಂತರ ಸಮಾವೇಶ ನಡೆಸಲಾಗುವುದು. ಅಲೆಮಾರಿಗಳ ಕುಲಕಸುಬು ಮತ್ತು ಕಲೆಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುತ್ತೇವೆ ಎಂದರು.</p>.<p class="Subhead"><strong>750 ಮಂದಿಗೆ ಹೊಲಿಗೆ ಯಂತ್ರ ವಿತರಣೆ</strong></p>.<p>ಮೊದಲ ಬಾರಿಗೆ ಅಲೆಮಾರಿ ಮತ್ತು ಅರೆಅಲೆಮಾರಿ ನಿರುದ್ಯೋಗಿಗಳಿಗೆ ಸ್ವ ಉದ್ಯೋಗ ಕಲ್ಪಿಸುವ ಹಿನ್ನೆಲೆಯಲ್ಲಿ ಕೌಶಲ ತರಬೇತಿ ಕಾರ್ಯಕ್ರಮವನ್ನು ರೂಪಿಸಿದ್ದು, ₹1.25 ಕೋಟಿ ಕಾಯ್ದಿರಿಸಲಾಗಿದೆ. ಟೇಲರಿಂಗ್, ಬ್ಯೂಟಿಷಿಯನ್ ತರಬೇತಿ ನೀಡುವ ಜತೆಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ವಿತರಿಸುತ್ತೇವೆ. ರಾಜ್ಯದ 750 ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದುರಾಜ್ಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ನಿಗಮದ ಅಧ್ಯಕ್ಷ ಕೆ.ರವೀಂದ್ರಶೆಟ್ಟಿ ತಿಳಿಸಿದರು.</p>.<p>ನಿಗಮದ ವ್ಯವಸ್ಥಾಪಕ ಮಹಾದೇವ ಮಳಲಿ, ಗೊಲ್ಲ ಸಮುದಾಯದ ಅಧ್ಯಕ್ಷ ಸಿ.ಎಂ. ತಂಗೋಡರ, ನಾಗರಾಜ, ಅಲೆಮಾರಿ ಸಮಾಜದ ಶೆಟ್ಟಿ ವಿಭೂತಿ, ಹುಲ್ಲಪ್ಪ ಜಾಡರ, ಅಶೋಕ ಬಸ್ತಿ, ಯಾದವ ಜನಾಂಗದ ಅಧ್ಯಕ್ಷ ಚಂದ್ರಶೇಖರ ಗೌಡರ, ಸತೀಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>