ಬುಧವಾರ ಮಧ್ಯಾಹ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸುಪ್ರೀಂ ಕೋರ್ಟ್ ತೀರ್ಪು ತೀವ್ರ ಅಸಮಾಧಾನ ಉಂಟು ಮಾಡಿದೆ. ತೀರ್ಪು ಮರು ಪರಿಶೀಲನೆಗೆ ಮೇಲ್ಮನವಿ ಸಲ್ಲಿಸುವ ಮತ್ತು ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ವಕೀಲರೊಂದಿಗೆ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.