<p><strong>ಹಾವೇರಿ:</strong>‘ನಮ್ಮ ಸಂಸ್ಕೃತಿ, ಸಂಸ್ಕಾರ ಮತ್ತು ಬದುಕುವ ರೀತಿ ಹಿಂದುತ್ವವಾಗಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕರ ಪ್ರಾಂತ ಕಾರ್ಯವಾಹಕ ರಾಘವೇಂದ್ರ ಕಾಗವಾಡ ಹೇಳಿದರು.</p>.<p>ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ನಡೆದ ವಿಜಯ ಸಂಗಮ ನಿಮಿತ್ತ ಪಥಸಂಚಲನ ಹಾಗೂ ಸಾರ್ವಜನಿಕ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಸ್ವಯಂ ಸೇವಕರು ಶ್ರಮಿಸುತ್ತಿದ್ದಾರೆ. ನಾವೆಲ್ಲರೂ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಬೇಕು’ ಎಂದರು.</p>.<p>ಸಮಾಜವನ್ನು ಸುಧಾರಿಸುವ ಕೆಲಸವನ್ನು ಪೂರ್ವಜರು ಅನಾದಿ ಕಾಲದಿಂದಲೂ ಮಾಡುತ್ತಾ ಬಂದಿರುವುದನ್ನು ನಾವು ಕಾಣುತ್ತಿದ್ದೇವೆ. ಅದನ್ನೇ ಸ್ವಯಂ ಸೇವಕರು ಮುಂದುವರಿಸುತ್ತಿದ್ದಾರೆ. ಇದರಲ್ಲಿ ಹೊಸ ಕೆಲಸ ಯಾವುದೂ ಇಲ್ಲ ಎಂದರು.</p>.<p>ಒಟ್ಟು ಸಮಾಜದ ಸಂಘಟನೆ ಮಾಡುವುದು ಸ್ವಯಂ ಸೇವಾ ಸಂಘದ ಮುಖ್ಯ ಉದ್ದೇಶ. ಹಿಂದೂ ಸಮಾಜದ ಸಂಘಟನೆ ಮಾಡುವುದರಿಂದ ಸಮಸ್ಯೆಯ ಪರಿಹಾರವನ್ನು ಕಾಣಬಹುದಾಗಿದೆ. ಧರ್ಮ ಎಂಬುದು ಪೂಜಾ ಪದ್ಧತಿಗೆ ಸಂಬಂಧವಿಲ್ಲ, ಇದು ಜೀವನಕ್ಕೆ ಸಂಬಂಧಿಸಿದ್ದಾಗಿದೆ ಎಂದರು.</p>.<p>ಸಾಹಿತಿ ಹನುಮಂತಗೌಡ ಗೊಲ್ಲರ ಮಾತನಾಡಿ, ‘ಸ್ವಯಂ ಸೇವಕರು ಸಂಸ್ಕೃತಿಯ ಭಾಗವಾಗಬೇಕು. ಪ್ರತಿಯೊಬ್ಬರೂ ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ಕಾರ್ಯಕ್ರಮಕ್ಕೂ ಮುನ್ನ ನೂರಾರು ಸ್ವಯಂ ಸೇವಕರಿಂದ ನಗರದ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಆರ್ಎಸ್ಎಸ್ ಜಿಲ್ಲಾ ಸಂಚಾಲಕ ಈಶ್ವರ ಹಾವನೂರ, ಶಾಸಕ ನೆಹರು ಓಲೇಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong>‘ನಮ್ಮ ಸಂಸ್ಕೃತಿ, ಸಂಸ್ಕಾರ ಮತ್ತು ಬದುಕುವ ರೀತಿ ಹಿಂದುತ್ವವಾಗಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕರ ಪ್ರಾಂತ ಕಾರ್ಯವಾಹಕ ರಾಘವೇಂದ್ರ ಕಾಗವಾಡ ಹೇಳಿದರು.</p>.<p>ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಶನಿವಾರ ನಡೆದ ವಿಜಯ ಸಂಗಮ ನಿಮಿತ್ತ ಪಥಸಂಚಲನ ಹಾಗೂ ಸಾರ್ವಜನಿಕ ಸಮಾರಂಭದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಷ್ಟ್ರೀಯ ಸ್ವಯಂ ಸೇವಕರು ಶ್ರಮಿಸುತ್ತಿದ್ದಾರೆ. ನಾವೆಲ್ಲರೂ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡಬೇಕು’ ಎಂದರು.</p>.<p>ಸಮಾಜವನ್ನು ಸುಧಾರಿಸುವ ಕೆಲಸವನ್ನು ಪೂರ್ವಜರು ಅನಾದಿ ಕಾಲದಿಂದಲೂ ಮಾಡುತ್ತಾ ಬಂದಿರುವುದನ್ನು ನಾವು ಕಾಣುತ್ತಿದ್ದೇವೆ. ಅದನ್ನೇ ಸ್ವಯಂ ಸೇವಕರು ಮುಂದುವರಿಸುತ್ತಿದ್ದಾರೆ. ಇದರಲ್ಲಿ ಹೊಸ ಕೆಲಸ ಯಾವುದೂ ಇಲ್ಲ ಎಂದರು.</p>.<p>ಒಟ್ಟು ಸಮಾಜದ ಸಂಘಟನೆ ಮಾಡುವುದು ಸ್ವಯಂ ಸೇವಾ ಸಂಘದ ಮುಖ್ಯ ಉದ್ದೇಶ. ಹಿಂದೂ ಸಮಾಜದ ಸಂಘಟನೆ ಮಾಡುವುದರಿಂದ ಸಮಸ್ಯೆಯ ಪರಿಹಾರವನ್ನು ಕಾಣಬಹುದಾಗಿದೆ. ಧರ್ಮ ಎಂಬುದು ಪೂಜಾ ಪದ್ಧತಿಗೆ ಸಂಬಂಧವಿಲ್ಲ, ಇದು ಜೀವನಕ್ಕೆ ಸಂಬಂಧಿಸಿದ್ದಾಗಿದೆ ಎಂದರು.</p>.<p>ಸಾಹಿತಿ ಹನುಮಂತಗೌಡ ಗೊಲ್ಲರ ಮಾತನಾಡಿ, ‘ಸ್ವಯಂ ಸೇವಕರು ಸಂಸ್ಕೃತಿಯ ಭಾಗವಾಗಬೇಕು. ಪ್ರತಿಯೊಬ್ಬರೂ ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಳ್ಳಬೇಕು’ ಎಂದರು.</p>.<p>ಕಾರ್ಯಕ್ರಮಕ್ಕೂ ಮುನ್ನ ನೂರಾರು ಸ್ವಯಂ ಸೇವಕರಿಂದ ನಗರದ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಆರ್ಎಸ್ಎಸ್ ಜಿಲ್ಲಾ ಸಂಚಾಲಕ ಈಶ್ವರ ಹಾವನೂರ, ಶಾಸಕ ನೆಹರು ಓಲೇಕಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>