<p>ಪ್ರಜಾವಾಣಿ ವಾರ್ತೆ</p>.<p><strong>ಹಾವೇರಿ:</strong> ಜಿಲ್ಲೆಯಾದ್ಯಂತ ಕೆಲದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಬುಧವಾರವೂ ಮಳೆ ಮುಂದುವರಿಯಿತು. ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗುತ್ತಿದ್ದು, ಹಾವೇರಿ ಜಿಲ್ಲೆಯಲ್ಲಿರುವ ವರದಾ, ಧರ್ಮಾ, ತುಂಗಭದ್ರಾ ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ.</p>.<p>ನದಿಗಳ ನೀರಿನ ಮಟ್ಟ ಹೆಚ್ಚಳವಾಗಿದ್ದು, ಇದರಿಂದಾಗಿ ಜಿಲ್ಲೆಯ ಎಂಟು ಕಡೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿವೆ. ಇದರಿಂದಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಪರ್ಯಾಯ ಮಾರ್ಗದ ಮೂಲಕ ಜನರು ಸಂಚರಿಸುತ್ತಿದ್ದಾರೆ.</p>.<p>ಸವಣೂರು ತಾಲ್ಲೂಕಿನ ಕಳಸೂರದಿಂದ ಹಾವೇರಿ/ಕರ್ಜಗಿ ರಸ್ತೆಗೆ ಸಂಪರ್ಕ ಕಲ್ಪಿಸುವ ವರದಾ ನದಿಯ ಸೇತುವೆ ಮುಳುಗಡೆಯಾಗಿದೆ. ಮೆಳ್ಳಾಗಟ್ಟಿ ಹಾಗೂ ದೇವಗಿರಿ ರಸ್ತೆ ಮೂಲಕ ಗ್ರಾಮಸ್ಥರು ಸಂಚರಿಸುತ್ತಿದ್ದಾರೆ.</p>.<p>ಹಾನಗಲ್ ತಾಲ್ಲೂಕಿನ ಲಕಮಾಪುರದಿಂದ ಬಾಳಂಬೀಡಕ್ಕೆ ಸಂಪರ್ಕ ಕಲ್ಪಿಸುವ ವರದಾ ನದಿ ಸೇತುವೆ ಹಾಗೂ ಕೂಡಲ ಗ್ರಾಮದಿಂದ ನಾಗನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ವರದಾ ನದಿ ಸೇತುವೆ ಮುಳುಗಡೆಯಾಗಿದೆ.</p>.<p>ಸುರಳೇಶ್ವರ ಗ್ರಾಮದಿಂದ ಕುಂಟನಹೊಸಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಧರ್ಮಾ ನದಿ ಸೇತುವೆ, ಗುಡೂರು–ಮಾರೋಳ ರಸ್ತೆ ನಡುವಿನ ಸೇತುವೆ, ಸವಣೂರು ತಾಲ್ಲೂಕಿನ ಚಿಕ್ಕಮಗದೂರು–ಕರ್ಜಗಿ ರಸ್ತೆಯಲ್ಲಿರುವ ಸೇತುವೆ, ಕಳಸೂರು–ಕೊಳೂರು ನಡುವಿನ ಸೇತುವೆ, ಹಿರೇಮರಳಿಹಳ್ಳಿಯಿಂದ ಕೋಣನತಂಬಗಿ ನಡುವಿನ ಸೇತುವೆ ಮುಳುಗಡೆಯಾಗಿದೆ.</p>.<p>ಹಾವೇರಿ ತಾಲ್ಲೂಕಿನ ದೇವಗಿರಿ ಬಳಿಯ ವರದಾ ನದಿ ಪಾತ್ರದಲ್ಲಿರುವ ದೇವಸ್ಥಾನ ಸಹ ಭಾಗಶಃ ಮುಳುಗಡೆಯಾಗಿದೆ. ನದಿ ಅಕ್ಕ–ಪಕ್ಕದ ಜಮೀನಿಗೂ ನೀರು ನುಗ್ಗುತ್ತಿದೆ.</p>.<p>ಜಿಲ್ಲಾ ಕೇಂದ್ರ ಹಾವೇರಿಯಲ್ಲಿಯೂ ಬುಧವಾರ ಬಿಡುವು ನೀಡುತ್ತಲೇ ಮಳೆಯಾಯಿತು. ಬುಧವಾರ ಕೆಲ ನಿಮಿಷ ಬಿಸಿಲು ಕಾಣಿಸಿಕೊಂಡರೂ ಬಹಳ ಹೊತ್ತು ಇರಲಿಲ್ಲ. ಮೋಡ ಕವಿದ ವಾತಾವರಣವೇ ಮುಂದುವರಿಯಿತು.</p>.<p>ರಾಣೆಬೆನ್ನೂರು, ಹಾನಗಲ್, ಬ್ಯಾಡಗಿ, ಹಿರೇಕೆರೂರು, ರಟ್ಟೀಹಳ್ಳಿ, ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕಿನಲ್ಲೂ ಬಿಡುವು ಕೊಡುತ್ತಲೇ ಉತ್ತಮ ಮಳೆಯಾಗಿದೆ.</p>.<p>ಬೆಳೆ ಹಾನಿ: ‘ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ 111 ಹೆಕ್ಟೇರ್ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಈ ಬಗ್ಗೆ ಜಂಟಿ ಸಮೀಕ್ಷೆ ನಡೆಯುತ್ತಿದೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>‘ಕೃಷಿ ಬೆಳೆ ಹಾನಿಯೂ ಆಗಿದೆ. ಈ ಬಗ್ಗೆ ರೈತರಿಂದ ಅರ್ಜಿಗಳನ್ನು ಪಡೆಯಲಾಗುತ್ತಿದೆ. ಕ್ಷೇತ್ರ ಪರಿಶೀಲನೆ ಪೂರ್ಣಗೊಂಡು, ಜಂಟಿ ಸಮೀಕ್ಷೆ ಮುಗಿದ ನಂತರ ವರದಿ ಪರಿಶೀಲಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಆಗಸ್ಟ್ 20ರವರೆಗೆ 370 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. 341 ವಿದ್ಯುತ್ ಕಂಬಗಳು ಹಾಗೂ 2 ಟ್ರಾನ್ಸ್ಫಾರ್ಮರ್ಗಳನ್ನು ಹೆಸ್ಕಾಂನವರು ಸರಿಪಡಿಸಿದ್ದಾರೆ. ಬಾಕಿ 29 ಕಂಬಗಳನ್ನು ನವೀಕರಿಸಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಹಾವೇರಿ:</strong> ಜಿಲ್ಲೆಯಾದ್ಯಂತ ಕೆಲದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಬುಧವಾರವೂ ಮಳೆ ಮುಂದುವರಿಯಿತು. ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗುತ್ತಿದ್ದು, ಹಾವೇರಿ ಜಿಲ್ಲೆಯಲ್ಲಿರುವ ವರದಾ, ಧರ್ಮಾ, ತುಂಗಭದ್ರಾ ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ.</p>.<p>ನದಿಗಳ ನೀರಿನ ಮಟ್ಟ ಹೆಚ್ಚಳವಾಗಿದ್ದು, ಇದರಿಂದಾಗಿ ಜಿಲ್ಲೆಯ ಎಂಟು ಕಡೆಗಳಲ್ಲಿ ಸೇತುವೆಗಳು ಮುಳುಗಡೆಯಾಗಿವೆ. ಇದರಿಂದಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಪರ್ಯಾಯ ಮಾರ್ಗದ ಮೂಲಕ ಜನರು ಸಂಚರಿಸುತ್ತಿದ್ದಾರೆ.</p>.<p>ಸವಣೂರು ತಾಲ್ಲೂಕಿನ ಕಳಸೂರದಿಂದ ಹಾವೇರಿ/ಕರ್ಜಗಿ ರಸ್ತೆಗೆ ಸಂಪರ್ಕ ಕಲ್ಪಿಸುವ ವರದಾ ನದಿಯ ಸೇತುವೆ ಮುಳುಗಡೆಯಾಗಿದೆ. ಮೆಳ್ಳಾಗಟ್ಟಿ ಹಾಗೂ ದೇವಗಿರಿ ರಸ್ತೆ ಮೂಲಕ ಗ್ರಾಮಸ್ಥರು ಸಂಚರಿಸುತ್ತಿದ್ದಾರೆ.</p>.<p>ಹಾನಗಲ್ ತಾಲ್ಲೂಕಿನ ಲಕಮಾಪುರದಿಂದ ಬಾಳಂಬೀಡಕ್ಕೆ ಸಂಪರ್ಕ ಕಲ್ಪಿಸುವ ವರದಾ ನದಿ ಸೇತುವೆ ಹಾಗೂ ಕೂಡಲ ಗ್ರಾಮದಿಂದ ನಾಗನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ವರದಾ ನದಿ ಸೇತುವೆ ಮುಳುಗಡೆಯಾಗಿದೆ.</p>.<p>ಸುರಳೇಶ್ವರ ಗ್ರಾಮದಿಂದ ಕುಂಟನಹೊಸಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಧರ್ಮಾ ನದಿ ಸೇತುವೆ, ಗುಡೂರು–ಮಾರೋಳ ರಸ್ತೆ ನಡುವಿನ ಸೇತುವೆ, ಸವಣೂರು ತಾಲ್ಲೂಕಿನ ಚಿಕ್ಕಮಗದೂರು–ಕರ್ಜಗಿ ರಸ್ತೆಯಲ್ಲಿರುವ ಸೇತುವೆ, ಕಳಸೂರು–ಕೊಳೂರು ನಡುವಿನ ಸೇತುವೆ, ಹಿರೇಮರಳಿಹಳ್ಳಿಯಿಂದ ಕೋಣನತಂಬಗಿ ನಡುವಿನ ಸೇತುವೆ ಮುಳುಗಡೆಯಾಗಿದೆ.</p>.<p>ಹಾವೇರಿ ತಾಲ್ಲೂಕಿನ ದೇವಗಿರಿ ಬಳಿಯ ವರದಾ ನದಿ ಪಾತ್ರದಲ್ಲಿರುವ ದೇವಸ್ಥಾನ ಸಹ ಭಾಗಶಃ ಮುಳುಗಡೆಯಾಗಿದೆ. ನದಿ ಅಕ್ಕ–ಪಕ್ಕದ ಜಮೀನಿಗೂ ನೀರು ನುಗ್ಗುತ್ತಿದೆ.</p>.<p>ಜಿಲ್ಲಾ ಕೇಂದ್ರ ಹಾವೇರಿಯಲ್ಲಿಯೂ ಬುಧವಾರ ಬಿಡುವು ನೀಡುತ್ತಲೇ ಮಳೆಯಾಯಿತು. ಬುಧವಾರ ಕೆಲ ನಿಮಿಷ ಬಿಸಿಲು ಕಾಣಿಸಿಕೊಂಡರೂ ಬಹಳ ಹೊತ್ತು ಇರಲಿಲ್ಲ. ಮೋಡ ಕವಿದ ವಾತಾವರಣವೇ ಮುಂದುವರಿಯಿತು.</p>.<p>ರಾಣೆಬೆನ್ನೂರು, ಹಾನಗಲ್, ಬ್ಯಾಡಗಿ, ಹಿರೇಕೆರೂರು, ರಟ್ಟೀಹಳ್ಳಿ, ಶಿಗ್ಗಾವಿ ಹಾಗೂ ಸವಣೂರು ತಾಲ್ಲೂಕಿನಲ್ಲೂ ಬಿಡುವು ಕೊಡುತ್ತಲೇ ಉತ್ತಮ ಮಳೆಯಾಗಿದೆ.</p>.<p>ಬೆಳೆ ಹಾನಿ: ‘ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ 111 ಹೆಕ್ಟೇರ್ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಈ ಬಗ್ಗೆ ಜಂಟಿ ಸಮೀಕ್ಷೆ ನಡೆಯುತ್ತಿದೆ’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>‘ಕೃಷಿ ಬೆಳೆ ಹಾನಿಯೂ ಆಗಿದೆ. ಈ ಬಗ್ಗೆ ರೈತರಿಂದ ಅರ್ಜಿಗಳನ್ನು ಪಡೆಯಲಾಗುತ್ತಿದೆ. ಕ್ಷೇತ್ರ ಪರಿಶೀಲನೆ ಪೂರ್ಣಗೊಂಡು, ಜಂಟಿ ಸಮೀಕ್ಷೆ ಮುಗಿದ ನಂತರ ವರದಿ ಪರಿಶೀಲಿಸಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p>‘ಆಗಸ್ಟ್ 20ರವರೆಗೆ 370 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. 341 ವಿದ್ಯುತ್ ಕಂಬಗಳು ಹಾಗೂ 2 ಟ್ರಾನ್ಸ್ಫಾರ್ಮರ್ಗಳನ್ನು ಹೆಸ್ಕಾಂನವರು ಸರಿಪಡಿಸಿದ್ದಾರೆ. ಬಾಕಿ 29 ಕಂಬಗಳನ್ನು ನವೀಕರಿಸಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>