<p><strong>ಹುಬ್ಬಳ್ಳಿ</strong>: ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಯು.ರಾಜಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಿನ ಹಳ್ಳ ಕ್ಯಾಂಪ್ನ ಕುರಿಗಾಹಿ ಲಕ್ಷ್ಮಣ (21) ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲು ಬಿದ್ದು ಚಂದ್ರಶೇಖರಪುರದಲ್ಲಿ ಈರಣ್ಣ ಎಂಬುವರ ರೇಷ್ಮೆ ಮನೆ ಸುಟ್ಟಿದೆ. ಪಪ್ಪಾಯ ಬೆಳೆ ನಾಶವಾಗಿದೆ. </p>.<p>ಹಾವೇರಿ ಜಿಲ್ಲೆ ಹಲವು ಕಡೆ ಜೋರು ಗಾಳಿ ಜೊತೆಗೆ ಆಲಿಕಲ್ಲು ಮಳೆಯಾಗಿದೆ. ಹಾವೇರಿ ತಾಲ್ಲೂಕಿನ ಕಳ್ಳಿಹಾಳ ಗ್ರಾಮದ ಮನೆಯೊಂದರ ತಗಡುಗಳು ಹಾರಿ ಹೋಗಿವೆ. ಸಿಡಿಲು–ಗುಡುಗಿನ ಆರ್ಭಟವೂ ಹೆಚ್ಚಾಗಿತ್ತು. ಅಲ್ಲಲ್ಲಿ ಗಿಡಮರಗಳು ಉರುಳಿಬಿದ್ದವು.</p>.<p>40 ಮೇಕೆ ಸಾವು (ಶಿವಮೊಗ್ಗ ವರದಿ): ತಾಲ್ಲೂಕಿನ ಬಾಳೆಕೊಪ್ಪ ಗ್ರಾಮದ ಬಳಿ ಮಂಗಳವಾರ ಸಂಜೆ ಭಾರಿ ಮಳೆ ಸುರಿದ ಸಂದರ್ಭ ಸಿಡಿಲು ಬಡಿದು 40 ಮೇಕೆ ಹಾಗೂ ಎರಡು ನಾಯಿ ಮರಿಗಳು ಮೃತಪಟ್ಟಿವೆ.</p>.<p>ಮೇಕೆ ಕಾಯುತ್ತಿದ್ದ ಬಾಳೆಕೊಪ್ಪ ನಿವಾಸಿ ಹುಚ್ಚಪ್ಪ (58) ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಯು.ರಾಜಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಿನ ಹಳ್ಳ ಕ್ಯಾಂಪ್ನ ಕುರಿಗಾಹಿ ಲಕ್ಷ್ಮಣ (21) ಮಂಗಳವಾರ ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲು ಬಿದ್ದು ಚಂದ್ರಶೇಖರಪುರದಲ್ಲಿ ಈರಣ್ಣ ಎಂಬುವರ ರೇಷ್ಮೆ ಮನೆ ಸುಟ್ಟಿದೆ. ಪಪ್ಪಾಯ ಬೆಳೆ ನಾಶವಾಗಿದೆ. </p>.<p>ಹಾವೇರಿ ಜಿಲ್ಲೆ ಹಲವು ಕಡೆ ಜೋರು ಗಾಳಿ ಜೊತೆಗೆ ಆಲಿಕಲ್ಲು ಮಳೆಯಾಗಿದೆ. ಹಾವೇರಿ ತಾಲ್ಲೂಕಿನ ಕಳ್ಳಿಹಾಳ ಗ್ರಾಮದ ಮನೆಯೊಂದರ ತಗಡುಗಳು ಹಾರಿ ಹೋಗಿವೆ. ಸಿಡಿಲು–ಗುಡುಗಿನ ಆರ್ಭಟವೂ ಹೆಚ್ಚಾಗಿತ್ತು. ಅಲ್ಲಲ್ಲಿ ಗಿಡಮರಗಳು ಉರುಳಿಬಿದ್ದವು.</p>.<p>40 ಮೇಕೆ ಸಾವು (ಶಿವಮೊಗ್ಗ ವರದಿ): ತಾಲ್ಲೂಕಿನ ಬಾಳೆಕೊಪ್ಪ ಗ್ರಾಮದ ಬಳಿ ಮಂಗಳವಾರ ಸಂಜೆ ಭಾರಿ ಮಳೆ ಸುರಿದ ಸಂದರ್ಭ ಸಿಡಿಲು ಬಡಿದು 40 ಮೇಕೆ ಹಾಗೂ ಎರಡು ನಾಯಿ ಮರಿಗಳು ಮೃತಪಟ್ಟಿವೆ.</p>.<p>ಮೇಕೆ ಕಾಯುತ್ತಿದ್ದ ಬಾಳೆಕೊಪ್ಪ ನಿವಾಸಿ ಹುಚ್ಚಪ್ಪ (58) ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>