ಸೊಳ್ಳೆಗಳ ಕಾಟ ತಾಳಲಾರದೇ ಮನೆಯಲ್ಲಿ ಮಕ್ಕಳು, ಹಿರಿಯರು ಚಡಪಡಿಸುವಂತಾಗಿದೆ. ಮಳೆಗಾಲವಾಗಿದ್ದರಿಂದ ಅಲ್ಲಲ್ಲಿ ಮಳೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿ ಹೆಚ್ಚಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದೆ. ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಸರಿಯಾಗಿಲ್ಲದ್ದಕ್ಕೆ ಮಳೆ ನೀರು ಮನೆಗಳಿಗೆ ನುಗ್ಗುತ್ತದೆ.ಮೂಲಸೌಲಭ್ಯಗಳಿಂದ ಜನರು ತೊಂದರೆ ಅನುಭವಿಸುವಂತಾಗಿದೆ ಎಂದು ನಿವಾಸಿಗಳು ಸಮಸ್ಯೆ ತೋಡಿಕೊಂಡರು.