ಶಿಗ್ಗಾವಿ: ನಾರಾಯಣಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ರಾಜೇಶ್ವರಿ ಬಡಿಗೇರ, ಉಪಾಧ್ಯಕ್ಷರಾಗಿ ಗದಿಗಯ್ಯ ಹಿರೇಮಠ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 12 ಜನ ಸದಸ್ಯರನ್ನು ಹೊಂದಿದ್ದು, ಹಿಂದಿನ ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಇಚ್ಚಂಗಿ, ಉಪಾಧ್ಯಕ್ಷ ಸಿದ್ಧಲಿಂಗೇಶ್ವರ ಕಲಿವಾರ ರಾಜೀನಾಮೆ ನೀಡಿದ್ದರು. ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ಬ ವರ್ಗ ಮೀಸಲಾಗಿತ್ತು.
ಚುನಾವಣೆ ಅಧಿಕಾರಿಯಾಗಿ ತಾಲ್ಲೂಕು ಪಂಚಾಯ್ತಿ ಇಒ ಪ್ರಶಾಂತ ತುರ್ಕಾಣಿ, ಚುನಾವಣೆ ಪ್ರಕ್ರಿಯೆಯಲ್ಲಿ ಸಹಾಯಕರಾಗಿ ತಾಪಂ ಎಸ್ಡಿಸಿ ಅಶೋಕ ಇಂದೂರ, ಪಿಡಿಒ ಈರಣ್ಣ ಗಾಣಿಗಿ ಕಾರ್ಯ ನಿರ್ವಹಿಸಿದರು.
ಅಭಿನಂದನಾ ಸಮಾರಂಭ: ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿಧರ ಹೊನ್ನಣ್ಣವರ, ಆಯ್ಕೆ ಮಾಡಿರುವ ವಾರ್ಡಿನ ಜನರ ಆಶೋತ್ತರಗಳಿಗೆ ಸ್ಪಂದಿಸಿ ಎಂದರು.