<p><strong>ಹಾವೇರಿ:</strong> ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಮೂಲದ ಸದ್ಯ ಬೆಂಗಳೂರಿನಲ್ಲಿರುವ ಡಾ. ಎಸ್.ವಿ. ಹಿತ್ತಲಮನಿ ಅವರಿಗೆ 2025ನೇ ಸಾಲಿನ ಕೃಷಿ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.</p>.<p>ನಿವೃತ್ತ ತೋಟಗಾರಿಕೆ ಇಲಾಖೆ ಹೆಚ್ಚುವರಿ ನಿರ್ದೇಶಕರೂ ಆಗಿರವು ಎಸ್.ವಿ. ಹಿತ್ತಲಮನಿ ಅವರ ಕೃಷಿ ಕ್ಷೇತ್ರದ ಸಾಧನೆ ಗುರುತಿಸಿ ರಾಜ್ಯ ಸರ್ಕಾರ ಈ ಪ್ರಶಸ್ತಿ ಘೋಷಿಸಿದೆ.</p>.<p>1953ರಲ್ಲಿ ಜನಿಸಿದ್ದ ಹಿತ್ತಲಮನಿ ಅವರು 1973ರಲ್ಲಿ ಬಿಎಸ್ಸಿ (ಕೃಷಿ) ಪದವಿ ಪಡೆದಿದ್ದಾರೆ. 1976ರಲ್ಲಿ ಎಂ.ಎಸ್ಸಿ. ಹಾಗೂ 1986ರಲ್ಲಿ ಪಿ.ಎಚ್ಡಿ ಪದವಿ ಪಡೆದಿದ್ದಾರೆ.</p>.<p>1976ರಲ್ಲಿ ತೋಟಗಾರಿಕೆ ಇಲಾಖೆ ಸೇವೆಗೆ ಸೇರಿದ್ದ ಹಿತ್ತಲಮನಿ ಅವರು ಹಿರಿಯ ಸಹಾಯಕ ನಿರ್ದೇಶಕ, ಉಪ ನಿರ್ದೇಶಕ, ಜಂಟಿ ನಿರ್ದೇಶಕ ಹಾಗೂ ಹೆಚ್ಚುವರಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು. 2013ರಲ್ಲಿ ನಿವೃತ್ತರಾಗಿರುವ ಇವರು, ಇಂದಿಗೂ ರೈತರಿಗೆ ಕೃಷಿ ಸಲಹೆಗಳನ್ನು ನೀಡುತ್ತಿದ್ದಾರೆ.</p>.<p>ನಿವೃತ್ತಿ ಬಳಿಕವೂ 12 ವರ್ಷಗಳಿಂದ ಆಧುನಿಕ ತಂತ್ರಜ್ಞಾನದ ಸಹಾಯದಿಂದ ತೋಟಗಾರಿಕೆ ಕೃಷಿ ಮಾಡುವುದು ಹೇಗೆ ? ಎಂಬಿತ್ಯಾದಿ ವಿಷಯಗಳ ಬಗ್ಗೆ ರಾಜ್ಯದ ರೈತರಿಗೆ ಸಲಹೆ ನೀಡುತ್ತಿದ್ದಾರೆ. ಕಡಿಮೆ ಮಳೆ ಇರುವ ಪ್ರದೇಶದಲ್ಲಿ ಯಾವ ಬೆಳೆ ಸೂಕ್ತ ಎಂಬ ಬಗ್ಗೆ ಸಂಶೋಧನೆ, ಅಧ್ಯಯನ ಮಾಡುತ್ತಿದ್ದಾರೆ.</p>.<p>ನೇರಳೆ, ಚಕೋತ, ಪಪ್ಪಾಯಿ, ಮಾವು, ಹಲಸು ಸೇರಿದಂತೆ ಇತತೆ ಹಣ್ಣುಗಳ ಹೊಸ ತಳಿಗಳ ಸಂಶೋಧನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ. ಕೃಷಿಯಲ್ಲಿ ಸಂರಕ್ಷಣಾ ತಂತ್ರಗಳ ಅಳವಡಿಕೆ, ಸಾವಯವ ಕೃಷಿ, ತಂತ್ರಜ್ಞಾನ ಬಳಕೆ, ಇತರ ಅಂಶಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಮೂಲದ ಸದ್ಯ ಬೆಂಗಳೂರಿನಲ್ಲಿರುವ ಡಾ. ಎಸ್.ವಿ. ಹಿತ್ತಲಮನಿ ಅವರಿಗೆ 2025ನೇ ಸಾಲಿನ ಕೃಷಿ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.</p>.<p>ನಿವೃತ್ತ ತೋಟಗಾರಿಕೆ ಇಲಾಖೆ ಹೆಚ್ಚುವರಿ ನಿರ್ದೇಶಕರೂ ಆಗಿರವು ಎಸ್.ವಿ. ಹಿತ್ತಲಮನಿ ಅವರ ಕೃಷಿ ಕ್ಷೇತ್ರದ ಸಾಧನೆ ಗುರುತಿಸಿ ರಾಜ್ಯ ಸರ್ಕಾರ ಈ ಪ್ರಶಸ್ತಿ ಘೋಷಿಸಿದೆ.</p>.<p>1953ರಲ್ಲಿ ಜನಿಸಿದ್ದ ಹಿತ್ತಲಮನಿ ಅವರು 1973ರಲ್ಲಿ ಬಿಎಸ್ಸಿ (ಕೃಷಿ) ಪದವಿ ಪಡೆದಿದ್ದಾರೆ. 1976ರಲ್ಲಿ ಎಂ.ಎಸ್ಸಿ. ಹಾಗೂ 1986ರಲ್ಲಿ ಪಿ.ಎಚ್ಡಿ ಪದವಿ ಪಡೆದಿದ್ದಾರೆ.</p>.<p>1976ರಲ್ಲಿ ತೋಟಗಾರಿಕೆ ಇಲಾಖೆ ಸೇವೆಗೆ ಸೇರಿದ್ದ ಹಿತ್ತಲಮನಿ ಅವರು ಹಿರಿಯ ಸಹಾಯಕ ನಿರ್ದೇಶಕ, ಉಪ ನಿರ್ದೇಶಕ, ಜಂಟಿ ನಿರ್ದೇಶಕ ಹಾಗೂ ಹೆಚ್ಚುವರಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು. 2013ರಲ್ಲಿ ನಿವೃತ್ತರಾಗಿರುವ ಇವರು, ಇಂದಿಗೂ ರೈತರಿಗೆ ಕೃಷಿ ಸಲಹೆಗಳನ್ನು ನೀಡುತ್ತಿದ್ದಾರೆ.</p>.<p>ನಿವೃತ್ತಿ ಬಳಿಕವೂ 12 ವರ್ಷಗಳಿಂದ ಆಧುನಿಕ ತಂತ್ರಜ್ಞಾನದ ಸಹಾಯದಿಂದ ತೋಟಗಾರಿಕೆ ಕೃಷಿ ಮಾಡುವುದು ಹೇಗೆ ? ಎಂಬಿತ್ಯಾದಿ ವಿಷಯಗಳ ಬಗ್ಗೆ ರಾಜ್ಯದ ರೈತರಿಗೆ ಸಲಹೆ ನೀಡುತ್ತಿದ್ದಾರೆ. ಕಡಿಮೆ ಮಳೆ ಇರುವ ಪ್ರದೇಶದಲ್ಲಿ ಯಾವ ಬೆಳೆ ಸೂಕ್ತ ಎಂಬ ಬಗ್ಗೆ ಸಂಶೋಧನೆ, ಅಧ್ಯಯನ ಮಾಡುತ್ತಿದ್ದಾರೆ.</p>.<p>ನೇರಳೆ, ಚಕೋತ, ಪಪ್ಪಾಯಿ, ಮಾವು, ಹಲಸು ಸೇರಿದಂತೆ ಇತತೆ ಹಣ್ಣುಗಳ ಹೊಸ ತಳಿಗಳ ಸಂಶೋಧನೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ. ಕೃಷಿಯಲ್ಲಿ ಸಂರಕ್ಷಣಾ ತಂತ್ರಗಳ ಅಳವಡಿಕೆ, ಸಾವಯವ ಕೃಷಿ, ತಂತ್ರಜ್ಞಾನ ಬಳಕೆ, ಇತರ ಅಂಶಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>