ಅಕ್ಕಿಆಲೂರ (ಹಾವೇರಿ ಜಿಲ್ಲೆ): ಗ್ರಾಮೀಣ ಜನರಿಗೆ ರಕ್ತದಾನ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಇಲ್ಲಿನ ‘ಸ್ನೇಹಮೈತ್ರಿ ಬ್ಲಡ್ ಆರ್ಮಿ’ಯು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾನಗಲ್ ಘಟಕದ ಸಹಕಾರದಲ್ಲಿ ನಿರ್ಮಿಸಿರುವ ‘ರಕ್ತದಾನ ರಥ’ (ಬಸ್) ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆಯಾಗಿದೆ.