<p><strong>ರಾಣೆಬೆನ್ನೂರು:</strong> ತಾಲ್ಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ಜಗದ್ಗುರು ಪಂಚಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ ಸೇವಾ ಸಮಿಯಿತಿಂದ ಮೇ. 11 ರಂದು ಮಧ್ಯಾಹ್ನ 3 ಗಂಟೆಗೆ ಜಗದ್ಗುರು ಪಂಚಾಚಾರ್ಯರ ಅಡ್ಡ ಪಲ್ಲಕ್ಕಿ ಮಹೋತ್ಸವ, ಸಾಮೂಹಿಕ ವಿವಾಹ ಮತ್ತು ವೀರಭದ್ರೇಶ್ವರ ದೇವಸ್ಥಾನದ ಗೋಪುರ ಕಳಸಾರೋಹಣ ಕಾರ್ಯಕ್ರಮ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಚನ್ನೇಶ್ವರಮಠದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಸಂಜೆ 6 ಗಂಟೆಗೆ ಜನಜಾಗೃತಿ ಧರ್ಮ ಸಭೆ ನಡೆಯುತ್ತದೆ. 50 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಸೇರುವ ನಿರೀಕ್ಷೆ ಇದೆ. ಈಗಾಗಲೇ ಸಮಿತಿಯವರು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ರಂಭಾಪುರಿ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಉಜ್ಜಯಿನಿ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮತ್ತು ಕಾಶಿ ವಿಶ್ವಾರಾಧ್ಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸುವರು. ಪ್ರಣಾವಾನಂದ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಹರಗುರ ಚರಮೂರ್ತಿಗಳು ಆಗಮಿಸುವರು.</p>.<p>ಹಿರಿಯ ವಕೀಲ ಪಿ.ಆರ್.ಕುಪ್ಪೇಲೂರು ಅಧ್ಯಕ್ಷತೆ ವಹಿಸುವರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮ ಸಭೆ ಉದ್ಘಾಟಿಸುವರು. ಶಾಸಕ ಪ್ರಕಾಶ ಕೋಳಿವಾಡ ಅವರು ಮಾತಂಗೆಮ್ಮದೇವಿ ದೇವಸ್ಥಾನವನ್ನು ಮತ್ತು ಮಾಜಿ ಶಾಸಕ ಅರುಣಕುಮಾರ ಪೂಜಾರ ಅವರು ಕಲ್ಮೇಶ್ವರ ದೇವಸ್ಥಾನವನ್ನು ಉದ್ಘಾಟಿಸುವರು.</p>.<p>ಸಂಸದ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಚಿವ ಈಶ್ವರ ಖಂಡ್ರೆ, ಉಪಸಭಾಪತಿ ರುದ್ರಪ್ಪ ಲಮಾಣಿ ವಿಶೇಷ ಆಹ್ವಾನಿತರಾಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಆಗಮಿಸುವರು.</p>.<p>ಇದೇ ಸಂದರ್ಭದಲ್ಲಿವಿಶೇಷ ಸೇವೆ ಮಾಡಿದ ದಾನಿಗಳನ್ನು ಹಾಗೂ ಭೂ ದಾನಿಗಳನ್ನು ಸನ್ಮಾನಿಸಲಾಗುವುದು. ಸರಿಗಮಪ ಕಾರ್ಯಕ್ರಮದ ದಿಯಾ ಹೆಗಡೆ ಸಂಗೀತ ಕಾರ್ಯಕ್ರಮ ನಡೆಸುವರು. ಕಾರಣ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ನೆಗಳೂರು ಗುರುಶಾಂತೇಶ್ವರ ಸ್ವಾಮೀಜಿ ತಿಳಿಸಿದರು.</p>.<p>ಶಿವಾನಂದ ಮುದಿಗೌಡ್ರ, ಆರ್.ವಿ.ಮಠದ, ಮಂಜುನಾಥ ಹಲವಾಗಲ, ಶಿವು ಸಣ್ಣಬೊಮ್ಮಾಜಿ, ಗಣೇಶ, ಜಗದೀಶ ಶೆಟ್ಟರ, ಮಾಹಾಂತೇಶ ಬೊಂಗಾಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-22-1871331866</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ತಾಲ್ಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ಜಗದ್ಗುರು ಪಂಚಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ ಸೇವಾ ಸಮಿಯಿತಿಂದ ಮೇ. 11 ರಂದು ಮಧ್ಯಾಹ್ನ 3 ಗಂಟೆಗೆ ಜಗದ್ಗುರು ಪಂಚಾಚಾರ್ಯರ ಅಡ್ಡ ಪಲ್ಲಕ್ಕಿ ಮಹೋತ್ಸವ, ಸಾಮೂಹಿಕ ವಿವಾಹ ಮತ್ತು ವೀರಭದ್ರೇಶ್ವರ ದೇವಸ್ಥಾನದ ಗೋಪುರ ಕಳಸಾರೋಹಣ ಕಾರ್ಯಕ್ರಮ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ನೆಗಳೂರು ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಚನ್ನೇಶ್ವರಮಠದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಸಂಜೆ 6 ಗಂಟೆಗೆ ಜನಜಾಗೃತಿ ಧರ್ಮ ಸಭೆ ನಡೆಯುತ್ತದೆ. 50 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಸೇರುವ ನಿರೀಕ್ಷೆ ಇದೆ. ಈಗಾಗಲೇ ಸಮಿತಿಯವರು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ರಂಭಾಪುರಿ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಉಜ್ಜಯಿನಿ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮತ್ತು ಕಾಶಿ ವಿಶ್ವಾರಾಧ್ಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸುವರು. ಪ್ರಣಾವಾನಂದ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಹರಗುರ ಚರಮೂರ್ತಿಗಳು ಆಗಮಿಸುವರು.</p>.<p>ಹಿರಿಯ ವಕೀಲ ಪಿ.ಆರ್.ಕುಪ್ಪೇಲೂರು ಅಧ್ಯಕ್ಷತೆ ವಹಿಸುವರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮ ಸಭೆ ಉದ್ಘಾಟಿಸುವರು. ಶಾಸಕ ಪ್ರಕಾಶ ಕೋಳಿವಾಡ ಅವರು ಮಾತಂಗೆಮ್ಮದೇವಿ ದೇವಸ್ಥಾನವನ್ನು ಮತ್ತು ಮಾಜಿ ಶಾಸಕ ಅರುಣಕುಮಾರ ಪೂಜಾರ ಅವರು ಕಲ್ಮೇಶ್ವರ ದೇವಸ್ಥಾನವನ್ನು ಉದ್ಘಾಟಿಸುವರು.</p>.<p>ಸಂಸದ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಚಿವ ಈಶ್ವರ ಖಂಡ್ರೆ, ಉಪಸಭಾಪತಿ ರುದ್ರಪ್ಪ ಲಮಾಣಿ ವಿಶೇಷ ಆಹ್ವಾನಿತರಾಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಆಗಮಿಸುವರು.</p>.<p>ಇದೇ ಸಂದರ್ಭದಲ್ಲಿವಿಶೇಷ ಸೇವೆ ಮಾಡಿದ ದಾನಿಗಳನ್ನು ಹಾಗೂ ಭೂ ದಾನಿಗಳನ್ನು ಸನ್ಮಾನಿಸಲಾಗುವುದು. ಸರಿಗಮಪ ಕಾರ್ಯಕ್ರಮದ ದಿಯಾ ಹೆಗಡೆ ಸಂಗೀತ ಕಾರ್ಯಕ್ರಮ ನಡೆಸುವರು. ಕಾರಣ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ನೆಗಳೂರು ಗುರುಶಾಂತೇಶ್ವರ ಸ್ವಾಮೀಜಿ ತಿಳಿಸಿದರು.</p>.<p>ಶಿವಾನಂದ ಮುದಿಗೌಡ್ರ, ಆರ್.ವಿ.ಮಠದ, ಮಂಜುನಾಥ ಹಲವಾಗಲ, ಶಿವು ಸಣ್ಣಬೊಮ್ಮಾಜಿ, ಗಣೇಶ, ಜಗದೀಶ ಶೆಟ್ಟರ, ಮಾಹಾಂತೇಶ ಬೊಂಗಾಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-22-1871331866</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>