<p><strong>ರಾಣೆಬೆನ್ನೂರು:</strong> ನಗರದಲ್ಲಿ ಗೋ ಹತ್ಯೆ ನಡೆಯುತ್ತಿರುವ ಸ್ಥಳವನ್ನು ಪೊಲೀಸರಿಗೆ ತೋರಿಸಲು ಭಜರಂಗದಳ ಕಾರ್ಯಕರ್ತರೂ ಮುಂದಾದ ಸಂದರ್ಭದಲ್ಲಿ ಅನ್ಯ ಕೋಮಿನ ಜನರು ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ಖತೀಬಗಲ್ಲಿಯಲ್ಲಿ ನಡೆದಿದೆ.</p>.<p>ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಮಾರುತಿ ನಗರದ ನಿವಾಸಿ ಭಜರಂಗದಳದ ಕಾರ್ಯಕರ್ತ ರುದ್ರೇಶ ಬುಕ್ಕಶೆಟ್ಟಿ ಅವರಿಗೆ ಬ್ಯಾಟ್ನಿಂದ ಹಲ್ಲೆ ಮಾಡಿದ್ದು, ಅವರು ತೀವ್ರ ಗಾಯಾಗೊಂಡಿದ್ದಾರೆ. ಹಲಗೇರಿ ರಸ್ತೆಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ನಗರಠಾಣೆ ಪಿಎಸ್ಐ ಪರಮೇಶ ಡಿ.ಬಿ ಹಾಗೂ ಪೊಲೀಸರು ಅವರು ಸ್ಥಳಕ್ಕೆ ಧಾವಿಸಿ ವಾತಾವರಣ ತಿಳಿಗೊಳಿಸಿದ್ದಾರೆ.</p>.<p>ಬಜರಂಗದಳ ಉತ್ತರ ಪ್ರಾಂತ ಸಂಚಾಲಕ ಸಂಚಾಲಕ ಅನಿಲ ಹಲವಾಗಲ ಮಾತನಾಡಿ, ರಾಣೆಬೆನ್ನೂರು ನಗರದಲ್ಲಿ ಬಹು ದಿನಗಳಿಂದ ಯತೇಚ್ಚವಾಗಿ ಗೋ ಸಾಗಾಟ ಮತ್ತು ಗೋ ಹತ್ಯೆ ನಡೆಯುತ್ತಿದೆ. ಈ ಬಗ್ಗೆ 15 ದಿನಗಳಿಂದ ನಮ್ಮ ಭಜರಂಗದಳ ಕಾರ್ಯಕರ್ತರು ಪೊಲೀಸ್ , ನಗರಸಭೆ ಹಾಗೂ ತಹಶೀಲ್ದಾರ ಅವರಿಗೆ ಅನೇಕ ಬಾರಿ ಮಾಹಿತಿ ಕೊಡುತ್ತ ಬಂದಿದ್ದಾರೆ. ಆದರೂ ನಗರದ ಕೆಲವೊಂದು ಕಡೆಗಳಲ್ಲಿ ಅಕ್ರಮ ಕಸಾಯಿಖಾನೆಗಳು ನಡೆಯುತ್ತಿದ್ದು ಮಾಹಿತಿಯನ್ನು ಕೂಡ ನೀಡಲಾಗಿತ್ತು. ಆದರೂ ಅವರು ಏನೂ ಕ್ರಮಕೈಗೊಂಡಿಲ್ಲ ಎಂದು ದೂರಿದರು.</p>.<p>‘ಅಕ್ರಮ ಗೋ ಹತ್ಯೆ ನಡೆದ ಬಗ್ಗೆ ನಮ್ಮ ಕಾರ್ಯಕರ್ತರು 112 ಸಂಖ್ಯೆಗೆ ಕರೆ ಮಾಡಿ ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ. ಆಗ ಪೊಲೀಸರು ಕಸಾಯಿಖಾನೆ ಸ್ಥಳ ಎಲ್ಲಿದೆ. ಎಲ್ಲಿ ಗೋ ಹತ್ಯೆ ನಡೆಯುತ್ತಿದೆ ತೋರಿಸ ಬನ್ನಿ ಎಂದು ಅಕ್ರಮ ಕಸಾಯಿಖಾನೆ ತೋರಿಸಿ ವಾಪಸ್ಸು ಬರುವಷ್ಟರಲ್ಲಿಯೇ ಅನ್ಯ ಕೋಮಿನ ಸಮಾಜದ ಗುಂಪಿನವರು ನಮ್ಮ ಕಾರ್ಯಕರ್ತರ ಮೇಲೆ ದೇವರಗುಡ್ಡ ರಸ್ತೆಯಲ್ಲಿ ಹಲ್ಲೆ ನಡೆಸಿದ್ದಾರೆ‘ ಎಂದು ಆರೋಪಿಸಿದರು.</p>.<p>ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಮಂಗಳವಾರ ರಾಣೆಬೆನ್ನೂರು ಬಂದ್ ಮಾಡಲಾಗುವುದು. ಕಾನೂನಿನ ಚೌಕಟ್ಟಿನಲ್ಲಿ ಸಾಗುತ್ತಿದ್ದೇವೆ ಎಂದರು. ಬಜರಂಗದಳದ ಜಿಲ್ಲಾ ಸಂಚಾಲಕ ವಿನಯ ಕರ್ನೂಲ, ಹಾವೇರಿ ಕಾರ್ಯದರ್ಶಿ ಮೃತ್ಯುಂಜಯ ಬೆಣ್ಣಿ ಹಾಗೂ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-22-1177687561</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ನಗರದಲ್ಲಿ ಗೋ ಹತ್ಯೆ ನಡೆಯುತ್ತಿರುವ ಸ್ಥಳವನ್ನು ಪೊಲೀಸರಿಗೆ ತೋರಿಸಲು ಭಜರಂಗದಳ ಕಾರ್ಯಕರ್ತರೂ ಮುಂದಾದ ಸಂದರ್ಭದಲ್ಲಿ ಅನ್ಯ ಕೋಮಿನ ಜನರು ಭಜರಂಗದಳದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ಖತೀಬಗಲ್ಲಿಯಲ್ಲಿ ನಡೆದಿದೆ.</p>.<p>ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಮಾರುತಿ ನಗರದ ನಿವಾಸಿ ಭಜರಂಗದಳದ ಕಾರ್ಯಕರ್ತ ರುದ್ರೇಶ ಬುಕ್ಕಶೆಟ್ಟಿ ಅವರಿಗೆ ಬ್ಯಾಟ್ನಿಂದ ಹಲ್ಲೆ ಮಾಡಿದ್ದು, ಅವರು ತೀವ್ರ ಗಾಯಾಗೊಂಡಿದ್ದಾರೆ. ಹಲಗೇರಿ ರಸ್ತೆಯ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ನಗರಠಾಣೆ ಪಿಎಸ್ಐ ಪರಮೇಶ ಡಿ.ಬಿ ಹಾಗೂ ಪೊಲೀಸರು ಅವರು ಸ್ಥಳಕ್ಕೆ ಧಾವಿಸಿ ವಾತಾವರಣ ತಿಳಿಗೊಳಿಸಿದ್ದಾರೆ.</p>.<p>ಬಜರಂಗದಳ ಉತ್ತರ ಪ್ರಾಂತ ಸಂಚಾಲಕ ಸಂಚಾಲಕ ಅನಿಲ ಹಲವಾಗಲ ಮಾತನಾಡಿ, ರಾಣೆಬೆನ್ನೂರು ನಗರದಲ್ಲಿ ಬಹು ದಿನಗಳಿಂದ ಯತೇಚ್ಚವಾಗಿ ಗೋ ಸಾಗಾಟ ಮತ್ತು ಗೋ ಹತ್ಯೆ ನಡೆಯುತ್ತಿದೆ. ಈ ಬಗ್ಗೆ 15 ದಿನಗಳಿಂದ ನಮ್ಮ ಭಜರಂಗದಳ ಕಾರ್ಯಕರ್ತರು ಪೊಲೀಸ್ , ನಗರಸಭೆ ಹಾಗೂ ತಹಶೀಲ್ದಾರ ಅವರಿಗೆ ಅನೇಕ ಬಾರಿ ಮಾಹಿತಿ ಕೊಡುತ್ತ ಬಂದಿದ್ದಾರೆ. ಆದರೂ ನಗರದ ಕೆಲವೊಂದು ಕಡೆಗಳಲ್ಲಿ ಅಕ್ರಮ ಕಸಾಯಿಖಾನೆಗಳು ನಡೆಯುತ್ತಿದ್ದು ಮಾಹಿತಿಯನ್ನು ಕೂಡ ನೀಡಲಾಗಿತ್ತು. ಆದರೂ ಅವರು ಏನೂ ಕ್ರಮಕೈಗೊಂಡಿಲ್ಲ ಎಂದು ದೂರಿದರು.</p>.<p>‘ಅಕ್ರಮ ಗೋ ಹತ್ಯೆ ನಡೆದ ಬಗ್ಗೆ ನಮ್ಮ ಕಾರ್ಯಕರ್ತರು 112 ಸಂಖ್ಯೆಗೆ ಕರೆ ಮಾಡಿ ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ. ಆಗ ಪೊಲೀಸರು ಕಸಾಯಿಖಾನೆ ಸ್ಥಳ ಎಲ್ಲಿದೆ. ಎಲ್ಲಿ ಗೋ ಹತ್ಯೆ ನಡೆಯುತ್ತಿದೆ ತೋರಿಸ ಬನ್ನಿ ಎಂದು ಅಕ್ರಮ ಕಸಾಯಿಖಾನೆ ತೋರಿಸಿ ವಾಪಸ್ಸು ಬರುವಷ್ಟರಲ್ಲಿಯೇ ಅನ್ಯ ಕೋಮಿನ ಸಮಾಜದ ಗುಂಪಿನವರು ನಮ್ಮ ಕಾರ್ಯಕರ್ತರ ಮೇಲೆ ದೇವರಗುಡ್ಡ ರಸ್ತೆಯಲ್ಲಿ ಹಲ್ಲೆ ನಡೆಸಿದ್ದಾರೆ‘ ಎಂದು ಆರೋಪಿಸಿದರು.</p>.<p>ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಮಂಗಳವಾರ ರಾಣೆಬೆನ್ನೂರು ಬಂದ್ ಮಾಡಲಾಗುವುದು. ಕಾನೂನಿನ ಚೌಕಟ್ಟಿನಲ್ಲಿ ಸಾಗುತ್ತಿದ್ದೇವೆ ಎಂದರು. ಬಜರಂಗದಳದ ಜಿಲ್ಲಾ ಸಂಚಾಲಕ ವಿನಯ ಕರ್ನೂಲ, ಹಾವೇರಿ ಕಾರ್ಯದರ್ಶಿ ಮೃತ್ಯುಂಜಯ ಬೆಣ್ಣಿ ಹಾಗೂ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-22-1177687561</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>