<p><strong>ರಾಣೆಬೆನ್ನೂರು</strong>: ತಾಲ್ಲೂಕಿನ ಹೊಸ ಮುಷ್ಟೂರು ಗ್ರಾಮದಲ್ಲಿ ಜ.13 ಮತ್ತು 14 ರಂದು ಎರಡು ದಿನಗಳ ಕಾಲ ಚೌಡೇಶ್ವರಿ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.</p>.<p>ಶಾಸಕ ಪ್ರಕಾಶ ಕೋಳಿವಾಡ ಹಾಗೂ ಗಣ್ಯರು ಉದ್ಘಾಟಿಸುವರು. ಜ.13 ರಂದು ಬೆಳಿಗ್ಗೆ 8 ಗಂಟೆಗೆ ಚೌಡೇಶ್ವರಿ ದೇವಿಯ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಡೊಳ್ಳು, ಬಾಜಾ, ಬಜಂತ್ರಿ, ಹಲಗೆಗಳ ಮೆರವಣಿಗೆಯ ಮೂಲಕ ದೇವಿಯ ಕಟ್ಟೆಯನ್ನು ಅಲಂಕರಿಸಲಾಗುವುದು. ದೇವಿಯ ಕಟ್ಟೆಗೆ ನೂತನವಾಗಿ ನಿರ್ಮಿಸಿದ ಮೇಲ್ಛಾವಣಿಯ ಕಟ್ಟಡವನ್ನು ಹಾಗೂ ಅಂದೇ ರಾತ್ರಿ 9 ಗಂಟೆಗೆ ಸುಪ್ರಸಿದ್ದ ಹೊಸಪೇಟೆಯ ಜ್ಯೂನಿಯರ್ ರವಿಚಂದ್ರನ್ ಅವರ ರೂಪಾಂಜಲಿ ಇವೆಂಟ್ಸ್ ಆರ್ಕೆಸ್ಟ್ರಾ ಅವರಿಂದ ಸ್ಟೇಜ್ ಆರ್ಕೆಸ್ಟ್ರಾ ಕಾರ್ಯಕ್ರಮ ನಡೆಯುತ್ತವೆ.</p>.<p>ರೈತ ಮುಖಂಡ ರವೀಂದ್ರಗೌಡ ಎಫ್. ಪಾಟೀಲ ಅಧ್ಯಕ್ಷತೆ ವಹಿಸುವರು. 14ರ ಬುಧವಾರ ಬೆಲ್ಲದ ಬಂಡಿ, ಎತ್ತಿನ ಮೆರವಣಿಗೆ ಹಾಗೂ ಹಲಗೆ ಕಲಾ ತಂಡದಿಂದ ಹೂವಿನ ಹಾರದ ಮೆರವಣಿಗೆ ನಡೆಸಿ ದೇವರಿಗೆ ಹರಕೆ ತೀರಿಸಲಾಗುವುದು ಎಂದು ಜಾತ್ರಾ ಮಹೋತ್ಸವದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ತಾಲ್ಲೂಕಿನ ಹೊಸ ಮುಷ್ಟೂರು ಗ್ರಾಮದಲ್ಲಿ ಜ.13 ಮತ್ತು 14 ರಂದು ಎರಡು ದಿನಗಳ ಕಾಲ ಚೌಡೇಶ್ವರಿ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ.</p>.<p>ಶಾಸಕ ಪ್ರಕಾಶ ಕೋಳಿವಾಡ ಹಾಗೂ ಗಣ್ಯರು ಉದ್ಘಾಟಿಸುವರು. ಜ.13 ರಂದು ಬೆಳಿಗ್ಗೆ 8 ಗಂಟೆಗೆ ಚೌಡೇಶ್ವರಿ ದೇವಿಯ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಡೊಳ್ಳು, ಬಾಜಾ, ಬಜಂತ್ರಿ, ಹಲಗೆಗಳ ಮೆರವಣಿಗೆಯ ಮೂಲಕ ದೇವಿಯ ಕಟ್ಟೆಯನ್ನು ಅಲಂಕರಿಸಲಾಗುವುದು. ದೇವಿಯ ಕಟ್ಟೆಗೆ ನೂತನವಾಗಿ ನಿರ್ಮಿಸಿದ ಮೇಲ್ಛಾವಣಿಯ ಕಟ್ಟಡವನ್ನು ಹಾಗೂ ಅಂದೇ ರಾತ್ರಿ 9 ಗಂಟೆಗೆ ಸುಪ್ರಸಿದ್ದ ಹೊಸಪೇಟೆಯ ಜ್ಯೂನಿಯರ್ ರವಿಚಂದ್ರನ್ ಅವರ ರೂಪಾಂಜಲಿ ಇವೆಂಟ್ಸ್ ಆರ್ಕೆಸ್ಟ್ರಾ ಅವರಿಂದ ಸ್ಟೇಜ್ ಆರ್ಕೆಸ್ಟ್ರಾ ಕಾರ್ಯಕ್ರಮ ನಡೆಯುತ್ತವೆ.</p>.<p>ರೈತ ಮುಖಂಡ ರವೀಂದ್ರಗೌಡ ಎಫ್. ಪಾಟೀಲ ಅಧ್ಯಕ್ಷತೆ ವಹಿಸುವರು. 14ರ ಬುಧವಾರ ಬೆಲ್ಲದ ಬಂಡಿ, ಎತ್ತಿನ ಮೆರವಣಿಗೆ ಹಾಗೂ ಹಲಗೆ ಕಲಾ ತಂಡದಿಂದ ಹೂವಿನ ಹಾರದ ಮೆರವಣಿಗೆ ನಡೆಸಿ ದೇವರಿಗೆ ಹರಕೆ ತೀರಿಸಲಾಗುವುದು ಎಂದು ಜಾತ್ರಾ ಮಹೋತ್ಸವದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>