<p>ರಾಣೆಬೆನ್ನೂರು: ಬೆಳಗಲೆಮ್ಮ ದೇವಾಂಗ ತತ್ವಮತ ಎಂಬ ನಾಮಾಂಕಿತದೊಂದಿಗೆ ದೇವಾಂಗ ಜ್ಯೋತಿ ಹೊತ್ತ ವಾಹನವನ್ನು ಗುರುವಾರ ತಾಲ್ಲೂಕು ದೇವಾಂಗ ಸಮಾಜದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.</p>.<p>ನಗರದ ದೊಡ್ಡಪೇಟೆ ಶ್ರೀರಾಮಲಿಂಗೇಶ್ವರ ದೇವಸ್ಥಾನದ ಬಳಿ ದೇವಾಂಗ ಜ್ಯೋತಿಗೆ ರಾಜ್ಯ ದೇವಾಂಗ ರತ್ನ ಪ್ರಶಸ್ತಿ ಪುರಸ್ಕೃತ ನಾರಾಯಣಪ್ಪ ಮಂಡಕ್ಕಿ ಹಾಗೂ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿದರು.</p>.<p>ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಬಸವರಾಜ ಮೈಲಾರ ಮಾತನಾಡಿ, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಶಕ್ತಪೀಠ ಬನಶಂಕರಿಯಲ್ಲಿ ಮೇ 9 ಮತ್ತು 10 ರಂದು ನಡೆಯಲಿರುವ ರಾಜ್ಯ ಮಟ್ಟದ ಅಖಿಲ ಭಾರತ ದೇವಾಂಗ ಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿ ಅವರ ಪಟ್ಟಾಭಿಷೇಕದ 36 ನೇ ವಾರ್ಷಿಕೋತ್ಸವ ಸಮಾರಂಭದ ಪ್ರಚಾರ ಹಿನ್ನೆಲೆಯಲ್ಲಿ ಈ ಜ್ಯೋತಿ ರಾಣೆಬೆನ್ನೂರು ತಾಲ್ಲೂಕಿಗೆ ಆಗಮಿಸಿದೆ ಎಂದರು.</p>.<p>ಇಲ್ಲಿಂದ ಆರಂಭವಾದ ಜ್ಯೋತಿ ಯಾತ್ರೆ ಸುಭಾಸ್ ಚೌಕ, ಬಸವೇಶ್ವರ ದೇವಸ್ಥಾನ, ತಳವಾರ ಗಲ್ಲಿ, ಎಡಿಬಿ ವೃತ್ತ, ಎಂ.ಜಿ.ರಸ್ತೆ, ದುರ್ಗಾ ವೃತ್ತದಿಂದ ಕುರುಬಗೇರಿ ಕುದರಿಗಲ್ಲಿಯ ಪ್ರಾಚೀನ ಶ್ರೀ ಬನಶಂಕರಿ ದೇವಸ್ಥಾನದ ಬಳಿ ಸಂಪನ್ನಗೊಂಡಿತು.</p>.<p>ಗೌರವ ಘಟಕದ ಅಧ್ಯಕ್ಷ ಸಂಕಪ್ಪ ಮಾರನಾಳ, ವೈದ್ಯ ಡಾ.ಬಸವರಾಜ ಎಸ್. ಕೇಲಗಾರ, ದೇವಾಂಗ ಸಂಘದ ತಾಲ್ಲೂಕು ಘಟದ ಅಧ್ಯಕ್ಷ ಬಸವರಾಜ ಪಿ. ಲಕ್ಷ್ಮೇಶ್ವರ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಗಿರೀಶ ಗುಳೇದಗುಡ್ಡ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-22-237538604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ಬೆಳಗಲೆಮ್ಮ ದೇವಾಂಗ ತತ್ವಮತ ಎಂಬ ನಾಮಾಂಕಿತದೊಂದಿಗೆ ದೇವಾಂಗ ಜ್ಯೋತಿ ಹೊತ್ತ ವಾಹನವನ್ನು ಗುರುವಾರ ತಾಲ್ಲೂಕು ದೇವಾಂಗ ಸಮಾಜದಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.</p>.<p>ನಗರದ ದೊಡ್ಡಪೇಟೆ ಶ್ರೀರಾಮಲಿಂಗೇಶ್ವರ ದೇವಸ್ಥಾನದ ಬಳಿ ದೇವಾಂಗ ಜ್ಯೋತಿಗೆ ರಾಜ್ಯ ದೇವಾಂಗ ರತ್ನ ಪ್ರಶಸ್ತಿ ಪುರಸ್ಕೃತ ನಾರಾಯಣಪ್ಪ ಮಂಡಕ್ಕಿ ಹಾಗೂ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿದರು.</p>.<p>ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಬಸವರಾಜ ಮೈಲಾರ ಮಾತನಾಡಿ, ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಶಕ್ತಪೀಠ ಬನಶಂಕರಿಯಲ್ಲಿ ಮೇ 9 ಮತ್ತು 10 ರಂದು ನಡೆಯಲಿರುವ ರಾಜ್ಯ ಮಟ್ಟದ ಅಖಿಲ ಭಾರತ ದೇವಾಂಗ ಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿ ಅವರ ಪಟ್ಟಾಭಿಷೇಕದ 36 ನೇ ವಾರ್ಷಿಕೋತ್ಸವ ಸಮಾರಂಭದ ಪ್ರಚಾರ ಹಿನ್ನೆಲೆಯಲ್ಲಿ ಈ ಜ್ಯೋತಿ ರಾಣೆಬೆನ್ನೂರು ತಾಲ್ಲೂಕಿಗೆ ಆಗಮಿಸಿದೆ ಎಂದರು.</p>.<p>ಇಲ್ಲಿಂದ ಆರಂಭವಾದ ಜ್ಯೋತಿ ಯಾತ್ರೆ ಸುಭಾಸ್ ಚೌಕ, ಬಸವೇಶ್ವರ ದೇವಸ್ಥಾನ, ತಳವಾರ ಗಲ್ಲಿ, ಎಡಿಬಿ ವೃತ್ತ, ಎಂ.ಜಿ.ರಸ್ತೆ, ದುರ್ಗಾ ವೃತ್ತದಿಂದ ಕುರುಬಗೇರಿ ಕುದರಿಗಲ್ಲಿಯ ಪ್ರಾಚೀನ ಶ್ರೀ ಬನಶಂಕರಿ ದೇವಸ್ಥಾನದ ಬಳಿ ಸಂಪನ್ನಗೊಂಡಿತು.</p>.<p>ಗೌರವ ಘಟಕದ ಅಧ್ಯಕ್ಷ ಸಂಕಪ್ಪ ಮಾರನಾಳ, ವೈದ್ಯ ಡಾ.ಬಸವರಾಜ ಎಸ್. ಕೇಲಗಾರ, ದೇವಾಂಗ ಸಂಘದ ತಾಲ್ಲೂಕು ಘಟದ ಅಧ್ಯಕ್ಷ ಬಸವರಾಜ ಪಿ. ಲಕ್ಷ್ಮೇಶ್ವರ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಗಿರೀಶ ಗುಳೇದಗುಡ್ಡ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-22-237538604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>