<p><strong>ರಾಣೆಬೆನ್ನೂರು</strong>: ಇಲ್ಲಿನ ಗುರುಕೊಟ್ಟೂರೇಶ್ವರ ನಗರದಲ್ಲಿ ವಿದ್ಯುತ್ ಸಮರ್ಪಕ ಪೂರೈಕೆ ಮಾಡಬೇಕೆಂದು ಆಗ್ರಹಿಸಿದ ನಿವಾಸಿಗಳು ಮಂಗಳವಾರ ಗಂಗಾಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ನಂತರ ಹೆಸ್ಕಾಂ ಎಇಇ ಯಲ್ಲಪ್ಪ ನೀರಲಗಿ ಹಾಗೂ ಸೆಕ್ಸನ್ ಆಫೀಸರ್ ಬಾಬಜಾನ್ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತ ಮುಖಂಡ ಬಾಬಣ್ಣ ಕೊಪ್ಪದ ಮಾತನಾಡಿ, ‘ಪಟ್ಟಣದ ಕೊಟ್ಟುರೇಶ್ವರ ನಗರದಲ್ಲಿ ಕಳೆದ ಎರಡು ಮೂರು ತಿಂಗಳಿನಿಂದ ಸ್ವಲ್ಪ ಗಾಳಿ ಬೀಸಿದರೂ ಸಾಕು ವಿದ್ಯುತ್ ಕಡಿತಗೊಳ್ಳುತ್ತದೆ. ಇದರಿಂದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ಈ ಕುರಿತು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಹೆಸ್ಕಾಂ ಕಚೇರಿ ಎದುರು ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ವಿದ್ಯುತ್ ಸಮಸ್ಯೆಯಿಂದಾಗಿ ರಾತ್ರಿಯಲ್ಲಿ ವಿಷಜಂತುಗಳ ಹಾವಳಿಯಿಂದ ಜನರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ. ಹಗಲಿನಲ್ಲಿ ವೃದ್ಧರು ಮನೆಯಲ್ಲಿ ಇರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ ಕೂಡಲೇ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಕ್ರಿಯಿಸಿದ ಹೆಸ್ಕಾಂ ಎಇಇ ಯಲ್ಲಪ್ಪ ನೀರಲಗಿ, ‘ಇನ್ನೊಂದು ವಾರದಲ್ಲಿ ಕೆರೆಯ ಅಂಗಳದಲ್ಲಿನ ಕಂಬಗಳನ್ನು ಸ್ಥಳಾಂತರಿಸಿ, ಹೊಸದಾಗಿ ಲೈನ್ ಎಳೆಯಲಾಗುವುದು’ ಎಂದು ಭರವಸೆ ನೀಡಿದರು.</p>.<p>ಈ ವೇಳೆ ಮುರುಗೇಶಣ್ಣ ಬೇತೂರು, ಗಣೇಶ ಸಾಲಿಮನಿ, ಪಂಚಾಕ್ಷರಯ್ಯ ಮುದಗಲ್ಮಠ, ಅಜ್ಜಪ್ಪ ಇಚ್ಚಂಗಿ, ರವಿಕುಮಾರ ಗಚ್ಚಿನಮಠ, ಕೊಟ್ರೇಶ ಹಾದಿಮನಿ, ಕೋಟೆಪ್ಪ ಕೊಪ್ಪದ, ಚೇತನ ರಾಜನಹಳ್ಳಿ, ನಾಗರಾಜ ತಿಮ್ಮಲಾಪುರ, ಹನುಮಂತ ದೊಡ್ಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-22-1545870178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು</strong>: ಇಲ್ಲಿನ ಗುರುಕೊಟ್ಟೂರೇಶ್ವರ ನಗರದಲ್ಲಿ ವಿದ್ಯುತ್ ಸಮರ್ಪಕ ಪೂರೈಕೆ ಮಾಡಬೇಕೆಂದು ಆಗ್ರಹಿಸಿದ ನಿವಾಸಿಗಳು ಮಂಗಳವಾರ ಗಂಗಾಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ನಂತರ ಹೆಸ್ಕಾಂ ಎಇಇ ಯಲ್ಲಪ್ಪ ನೀರಲಗಿ ಹಾಗೂ ಸೆಕ್ಸನ್ ಆಫೀಸರ್ ಬಾಬಜಾನ್ ಅವರಿಗೆ ಮನವಿ ಸಲ್ಲಿಸಿದರು.</p>.<p>ರೈತ ಮುಖಂಡ ಬಾಬಣ್ಣ ಕೊಪ್ಪದ ಮಾತನಾಡಿ, ‘ಪಟ್ಟಣದ ಕೊಟ್ಟುರೇಶ್ವರ ನಗರದಲ್ಲಿ ಕಳೆದ ಎರಡು ಮೂರು ತಿಂಗಳಿನಿಂದ ಸ್ವಲ್ಪ ಗಾಳಿ ಬೀಸಿದರೂ ಸಾಕು ವಿದ್ಯುತ್ ಕಡಿತಗೊಳ್ಳುತ್ತದೆ. ಇದರಿಂದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ಈ ಕುರಿತು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಹೆಸ್ಕಾಂ ಕಚೇರಿ ಎದುರು ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>ವಿದ್ಯುತ್ ಸಮಸ್ಯೆಯಿಂದಾಗಿ ರಾತ್ರಿಯಲ್ಲಿ ವಿಷಜಂತುಗಳ ಹಾವಳಿಯಿಂದ ಜನರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ. ಹಗಲಿನಲ್ಲಿ ವೃದ್ಧರು ಮನೆಯಲ್ಲಿ ಇರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ ಕೂಡಲೇ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಕ್ರಿಯಿಸಿದ ಹೆಸ್ಕಾಂ ಎಇಇ ಯಲ್ಲಪ್ಪ ನೀರಲಗಿ, ‘ಇನ್ನೊಂದು ವಾರದಲ್ಲಿ ಕೆರೆಯ ಅಂಗಳದಲ್ಲಿನ ಕಂಬಗಳನ್ನು ಸ್ಥಳಾಂತರಿಸಿ, ಹೊಸದಾಗಿ ಲೈನ್ ಎಳೆಯಲಾಗುವುದು’ ಎಂದು ಭರವಸೆ ನೀಡಿದರು.</p>.<p>ಈ ವೇಳೆ ಮುರುಗೇಶಣ್ಣ ಬೇತೂರು, ಗಣೇಶ ಸಾಲಿಮನಿ, ಪಂಚಾಕ್ಷರಯ್ಯ ಮುದಗಲ್ಮಠ, ಅಜ್ಜಪ್ಪ ಇಚ್ಚಂಗಿ, ರವಿಕುಮಾರ ಗಚ್ಚಿನಮಠ, ಕೊಟ್ರೇಶ ಹಾದಿಮನಿ, ಕೋಟೆಪ್ಪ ಕೊಪ್ಪದ, ಚೇತನ ರಾಜನಹಳ್ಳಿ, ನಾಗರಾಜ ತಿಮ್ಮಲಾಪುರ, ಹನುಮಂತ ದೊಡ್ಮನಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-22-1545870178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>