<p>ರಾಣೆಬೆನ್ನೂರು: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆ ಹಾಗೂ ಆಲಿಕಲ್ಲು ಮಳೆಯ ಅಬ್ಬರದಿಂದ ಅಪಾರ ಹಾನಿ ಸಂಭವಿಸಿದ್ದು, ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಒತ್ತಾಯಿಸಿದರು.</p>.<p>ಇಲ್ಲಿನ ಬೀರೇಶ್ವರನಗರದ ಗೃಹ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವಿಳಂಬ ಮಾಡದೆ ಸಂಕಷ್ಟದಲ್ಲಿರುವ ರೈತರಿಗೆ ವೈಜ್ಞಾನಿಕ ಪರಿಹಾರ ವಿತರಿಸಬೇಕು’ ಎಂದು ಆಗ್ರಹಿಸಿದರು.</p>.<p>ಜೋರಾದ ಮಳೆಯಿಂದ ನಗರದ ವಿವಿಧ ವಾರ್ಡ್ಗಳ ಮನೆ ಮತ್ತು ಅಂಗಡಿಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ಬಡವರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಗಾಳಿ ಸಮೇತ ಸುರಿದ ಮಳೆಯಿಂದ ಕೆಲವು ಶಾಲೆಗಳ ಮೇಲ್ಛಾವಣಿ ಹಾನಿಗೊಳಗಾಗಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಈ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು’ ಎಂದರು.</p>.<p>ತಾಲ್ಲೂಕಿನಾದ್ಯಂತ ಹಾನಿಯಾದ ಸ್ಥಳಗಳಿಗೆ ಇದುವರೆಗೂ ಯಾವುದೇ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಅವರು, ಈ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ವಹಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p>ವೈದ್ಯ ಡಾ.ನಾಗೇಶಗೌಡರ, ಎಸ್.ಎಸ್.ಬೆಲ್ಲದ, ಹನುಮಂತರಾಜ್ ಚನ್ನಗೌಡ, ಗಂಗಣ್ಣ ಬೂದನೂರ, ಯುವರಾಜ ಬಾರಟಕ್ಕೆ, ವಿಜಯಕುಮಾರ ಹೆಡಿಯಾಲ, ಸೋಮಣ್ಣ ಹಲಗೇರಿ, ಬಸವರಾಜ ರೊಡ್ಡನವರ, ಪರಶುರಾಮ ಹಾಲ್ಯಾಳ, ಚಂದ್ರಣ್ಣ ಗೋಣಿಬಸಮ್ಮನವರ, ಗುಡ್ಡೇಶ ನಿಟ್ಟೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-22-696462073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆ ಹಾಗೂ ಆಲಿಕಲ್ಲು ಮಳೆಯ ಅಬ್ಬರದಿಂದ ಅಪಾರ ಹಾನಿ ಸಂಭವಿಸಿದ್ದು, ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಒತ್ತಾಯಿಸಿದರು.</p>.<p>ಇಲ್ಲಿನ ಬೀರೇಶ್ವರನಗರದ ಗೃಹ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ವಿಳಂಬ ಮಾಡದೆ ಸಂಕಷ್ಟದಲ್ಲಿರುವ ರೈತರಿಗೆ ವೈಜ್ಞಾನಿಕ ಪರಿಹಾರ ವಿತರಿಸಬೇಕು’ ಎಂದು ಆಗ್ರಹಿಸಿದರು.</p>.<p>ಜೋರಾದ ಮಳೆಯಿಂದ ನಗರದ ವಿವಿಧ ವಾರ್ಡ್ಗಳ ಮನೆ ಮತ್ತು ಅಂಗಡಿಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ಬಡವರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಗಾಳಿ ಸಮೇತ ಸುರಿದ ಮಳೆಯಿಂದ ಕೆಲವು ಶಾಲೆಗಳ ಮೇಲ್ಛಾವಣಿ ಹಾನಿಗೊಳಗಾಗಿದ್ದು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಈ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು’ ಎಂದರು.</p>.<p>ತಾಲ್ಲೂಕಿನಾದ್ಯಂತ ಹಾನಿಯಾದ ಸ್ಥಳಗಳಿಗೆ ಇದುವರೆಗೂ ಯಾವುದೇ ಅಧಿಕಾರಿಗಳು ಬೆಳೆ ಹಾನಿ ಸಮೀಕ್ಷೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಅವರು, ಈ ಕುರಿತು ಅಧಿಕಾರಿಗಳು ಸೂಕ್ತ ಕ್ರಮ ವಹಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದರು.</p>.<p>ವೈದ್ಯ ಡಾ.ನಾಗೇಶಗೌಡರ, ಎಸ್.ಎಸ್.ಬೆಲ್ಲದ, ಹನುಮಂತರಾಜ್ ಚನ್ನಗೌಡ, ಗಂಗಣ್ಣ ಬೂದನೂರ, ಯುವರಾಜ ಬಾರಟಕ್ಕೆ, ವಿಜಯಕುಮಾರ ಹೆಡಿಯಾಲ, ಸೋಮಣ್ಣ ಹಲಗೇರಿ, ಬಸವರಾಜ ರೊಡ್ಡನವರ, ಪರಶುರಾಮ ಹಾಲ್ಯಾಳ, ಚಂದ್ರಣ್ಣ ಗೋಣಿಬಸಮ್ಮನವರ, ಗುಡ್ಡೇಶ ನಿಟ್ಟೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-22-696462073</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>