ಹಾವೇರಿ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ, ವಂಚಿಸಿದ್ದ ಅಪರಾಧಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕಿರಣ ಕಿಣಿ ಅವರು ಹತ್ತು ವರ್ಷ ಜೈಲು ಶಿಕ್ಷೆ ಮತ್ತು ₹ 25 ಸಾವಿರ ದಂಡ ವಿಧಿಸಿದ್ದಾರೆ.
ಹಂಸಭಾವಿ ಠಾಣಾ ವ್ಯಾಪ್ತಿಯ ಲಿಂಗಾಪುರ ಗ್ರಾಮದಮಂಜುನಾಥ ಚೌಡಣ್ಣನವರ ಎಂಬುವವನು, ತಮ್ಮ ಹೊಲದ ಕೂಲಿ ಕೆಲಸಕ್ಕೆ ಬರುತ್ತಿದ್ದ ಯುವತಿಯನ್ನು ನಂಬಿಸಿ, ಪದೇ ಪದೇ ಅತ್ಯಾಚಾರ ನಡೆಸಿದ್ದ. ಆರು ತಿಂಗಳ ಗರ್ಭಿಣಿಯಾದ ಯುವತಿ, ಮದುವೆಯಾಗುವಂತೆ ಕೇಳಿದಾಗ, ಜಾತಿ ನಿಂದನೆ ಮಾಡಿ ವಂಚಿಸಿದ್ದ.
ಹಂಸಭಾವಿ ಠಾಣೆಯಲ್ಲಿ ನೊಂದ ಯುವತಿ ದೂರು ದಾಖಲಿಸಿದ್ದರು. ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸಿದ್ಧಾರೂಢ ಎಂ.ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು.