ಬಾಲಕಿಯನ್ನು ಮದುವೆಯಾಗುವುದಾಗಿ ಮಾರ್ಚ್-2015ರಲ್ಲಿ ಅಪಹರಿಸಿಕೊಂಡು ಹೋಗಿ, ತಾಳಿಕಟ್ಟಿ ಒತ್ತಾಯದಿಂದ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹಿರೇಕೆರೂರಿನ ಸರ್ಕಲ್ ಇನ್ಸ್ಪೆಕ್ಟರ್ ಎಸ್.ಟಿ. ಯೋಗೀಶ ಅವರು ಪ್ರಕರಣದ ತನಿಖೆ ನಡೆಸಿ, ಆರೋಪಿತನ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.