<p>ರಟ್ಟೀಹಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಕಾರ್ಮಿಕರು ಆರ್ಥಿಕ ಶಕ್ತಿ ಹೆಚ್ಚಿಸಲು ನರೇಗಾ ಯೋಜನೆ ಪ್ರಮುಖ ಪಾತ್ರವಹಿಸಿದೆ ಎಂದು ಸಹಾಯಕ ನಿರ್ದೇಶಕ ಪ್ರದೀಪ ಗಣೇಶ್ಕರ್ ಹೇಳಿದರು.</p>.<p>ಅವರು ತಾಲ್ಲೂಕಿನ ಕುಡುಪಲಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಬಡಸಂಗಾಪುರ ಗ್ರಾಮದಲ್ಲಿ ಶುಕ್ರವಾರ ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿ ಮಾತನಾಡಿದರು.</p>.<p>ಗ್ರಾಮಗಳಲ್ಲಿ ನಮ್ಮ ಹೊಲ ನಮ್ಮ ದಾರಿ, ಕಾಂಕ್ರೀಟ್ ರಸ್ತೆ, ಗಟಾರ, ಗ್ರಾಮೀಣ ಗೋದಾಮು, ನಿರ್ಮಾಣ ಸೇರಿದಂತೆ ಹಲವಾರು ಕಾಮಗಾರಿ ಕೈಗೊಂಡು ಅಭಿವೃದ್ಧಿ ಪಡಿಸಲಾಗಿದೆ. ಜನರಿಗೆ ನಿರಂತರ ಉದ್ಯೋಗ ನೀಡುವ ಮೂಲಕ ಜನರಿಗೂ ಆರ್ಥಿಕ ಭದ್ರತೆ ನೀಡಲಾಗಿದೆ. ಕಾರ್ಮಿಕರ ವಲಸೆ ತಪ್ಪಿಸಲಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಪ್ಪ ಚಿಕ್ಕಣ್ಣನವರ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ಜನರ ಸಹಕಾರ ಮುಖ್ಯ, ಕೆರೆ ಅಭಿವೃದ್ಧಿಯಿಂದ ಸುತ್ತಮುತ್ತಲೂ ನೀರಿನ ಲಭ್ಯತೆ ಹೆಚ್ಚಾಗುತ್ತದೆ. ಕಾಮಗಾರಿ ಕೆಲಸವನ್ನು ಉತ್ತಮವಾಗಿ ಮಾಡಿ, ಸರಿಯಾಗಿ ಹೊಳೆತ್ತಬೇಕು ಎಂದರು. ಈ ವೇಳೆ ತಾಲ್ಲೂಕು ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ, ಮಾಲತೇಶ ಮಾಳಗಿ, ಕಾಯಕಬಂಧು ಸಂತೋಷ ಸೇರಿದಂತೆ ಕಾರ್ಮಿಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-22-1649544441</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಟ್ಟೀಹಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಕಾರ್ಮಿಕರು ಆರ್ಥಿಕ ಶಕ್ತಿ ಹೆಚ್ಚಿಸಲು ನರೇಗಾ ಯೋಜನೆ ಪ್ರಮುಖ ಪಾತ್ರವಹಿಸಿದೆ ಎಂದು ಸಹಾಯಕ ನಿರ್ದೇಶಕ ಪ್ರದೀಪ ಗಣೇಶ್ಕರ್ ಹೇಳಿದರು.</p>.<p>ಅವರು ತಾಲ್ಲೂಕಿನ ಕುಡುಪಲಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಬಡಸಂಗಾಪುರ ಗ್ರಾಮದಲ್ಲಿ ಶುಕ್ರವಾರ ಕೆರೆ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿ ಮಾತನಾಡಿದರು.</p>.<p>ಗ್ರಾಮಗಳಲ್ಲಿ ನಮ್ಮ ಹೊಲ ನಮ್ಮ ದಾರಿ, ಕಾಂಕ್ರೀಟ್ ರಸ್ತೆ, ಗಟಾರ, ಗ್ರಾಮೀಣ ಗೋದಾಮು, ನಿರ್ಮಾಣ ಸೇರಿದಂತೆ ಹಲವಾರು ಕಾಮಗಾರಿ ಕೈಗೊಂಡು ಅಭಿವೃದ್ಧಿ ಪಡಿಸಲಾಗಿದೆ. ಜನರಿಗೆ ನಿರಂತರ ಉದ್ಯೋಗ ನೀಡುವ ಮೂಲಕ ಜನರಿಗೂ ಆರ್ಥಿಕ ಭದ್ರತೆ ನೀಡಲಾಗಿದೆ. ಕಾರ್ಮಿಕರ ವಲಸೆ ತಪ್ಪಿಸಲಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಶಿವಲಿಂಗಪ್ಪ ಚಿಕ್ಕಣ್ಣನವರ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ಜನರ ಸಹಕಾರ ಮುಖ್ಯ, ಕೆರೆ ಅಭಿವೃದ್ಧಿಯಿಂದ ಸುತ್ತಮುತ್ತಲೂ ನೀರಿನ ಲಭ್ಯತೆ ಹೆಚ್ಚಾಗುತ್ತದೆ. ಕಾಮಗಾರಿ ಕೆಲಸವನ್ನು ಉತ್ತಮವಾಗಿ ಮಾಡಿ, ಸರಿಯಾಗಿ ಹೊಳೆತ್ತಬೇಕು ಎಂದರು. ಈ ವೇಳೆ ತಾಲ್ಲೂಕು ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ, ಮಾಲತೇಶ ಮಾಳಗಿ, ಕಾಯಕಬಂಧು ಸಂತೋಷ ಸೇರಿದಂತೆ ಕಾರ್ಮಿಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-22-1649544441</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>